Friday, April 18, 2025
Google search engine

Homeರಾಜ್ಯಸುದ್ದಿಜಾಲವಿಜ್ಞಾನ ಶಿಕ್ಷಕರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ : ಡಾ. ರಾಜು

ವಿಜ್ಞಾನ ಶಿಕ್ಷಕರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ : ಡಾ. ರಾಜು

ರಾಮನಗರ : ಮಲೇರಿಯಾ ವಿರೋಧ ಮಾಸಾಚರಣೆ ಅಂಗವಾಗಿ ಸರ್ಕಾರಿ / ಖಾಸಗಿ ಹಿರಿಯ ಪಾಠಶಾಲೆ ಹಾಗೂ ಪ್ರೌಢಶಾಲೆಯ ಪ್ರತಿ ಶಾಲೆಯಿಂದ ಒಬ್ಬ ವಿಜ್ಞಾನ ಶಿಕ್ಷಕರಿಗೆ ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗಿ, ಚಿಕುನ್‌ಗುನ್ಯ, ಮೆದುಳು ಜ್ವರ, ಆನೆಕಾಲು ರೋಗಗಳು ಹಾಗೂ ನಿಯಂತ್ರಣ ಕುರಿತು ತರಬೇತಿ ಹಮ್ಮಿಕೊಂಡಿದ್ದು ಕಾರ್ಯಾಗಾರ ಮುಗಿದ ನಂತರ ನೀವುಗಳು ಸಂಪನ್ಮೂಲ ವ್ಯಕ್ತಿಯೆಂದು ಪರಿಗಣಿಸಲಾಗುವುದು.

ತಮ್ಮ ಶಾಲಾ ಮಕ್ಕಳಿಗೆ ಸೊಳ್ಳೆಗಳಿಂದ ಹರಡುವ ರೋಗಗಳು, ರೋಗಲಕ್ಷಣಗಳು, ಪತ್ತೆ, ಚಿಕಿತ್ಸೆ ಮುಖ್ಯವಾಗಿ ಮುಂಜಾಗೃತ ಕ್ರಮಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಹಕರಿಸುವಂತೆಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಶಶಿಧರ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಕನಕಪುರತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕನಕಪುರ ಟೌನಿನ ರೂರಲ್ ಕಾಲೇಜು ಸಭಾಂಗಣದಲ್ಲಿ ವಿಜ್ಞಾನ ಶಿಕ್ಷಕರುಗಳಿಗೆ ರೋಗವಾಹಕ ಆಶ್ರಿತ ರೋಗಗಳು ಹಾಗೂ ನಿಯಂತ್ರಣ ಕುರಿತು ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ತಾಲ್ಲೂಕು ಆರೋಗ್ಯಾಧಿಕಾರಿಡಾ. ರಾಜು ಅವರು ಮಾತನಾಡಿ, ಕಾರ್ಯಾಗಾರದ ಮುಖ್ಯ ಉದ್ದೇಶ ಸೊಳ್ಳೆಗಳಿಂದ ಹರಡುವ ರೋಗಗಳನ್ನು ನಿಯಂತ್ರಿಸಲು ಶಾಲಾ ಮಕ್ಕಳಲ್ಲಿ ಅರಿವು ಮೂಡಿಸಲು ತಮಗೆ ಮಾಹಿತಿ ನೀಡಲಾಗುತ್ತಿದ್ದು ಸಂಪನ್ಮೂಲ ವ್ಯಕ್ತಿಯಾದ ತಾವುಗಳು ಮಕ್ಕಳಲ್ಲಿ ಅರಿವು ಮೂಡಿಸಿ ಸೊಳ್ಳೆನಿಯಂತ್ರಣ ವಿಧಾನಗಳ ಮಾದರಿ ಪ್ರದರ್ಶನ ಸ್ಪರ್ದೆಯನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಲಾಗುವುದು. ಮಕ್ಕಳು ಭಾಗವಹಿಸುವಂತೆ ಪ್ರೋತ್ಸಾಹಿಸಬೇಕೆಂದು ತಿಳಿಸಿದರು.
ಕೀಟಶಾಸ್ತçಜ್ಞರಾದಸೌಮ್ಯ ಅವರು ಮಾತನಾಡಿ, ಸೊಳ್ಳೆಗಳಿಂದ ಪ್ರಮುಖವಾಗಿ ಮಲೇರಿಯ, ಡೆಂಗಿ, ಚಿಕುನ್ ಗುನ್ಯ, ಮೆದುಳುಜ್ವರ ರೋಗಗಳು ಹರಡುತ್ತವೆ. ಸೋಂಕಿತ ಸೊಳ್ಳೆಗಳು ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ ರೋಗವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಮಲೇರಿಯ ಸೋಂಕು ತಗುಲಿದಾಗ ಚಳಿ, ಜ್ವರ, ತಲೆನೋವು, ನಡುಕ, ವಾಂತಿ, ವಾಕರಿಕೆ, ಮೈ-ಕೈನೋವು, ಡೆಂಗಿಜ್ವರದಲ್ಲಿ ಮೈಮೇಲೆ ಕೆಂಪು ಗಂದೆಗಳು, ಕಣ್ಣಿನ ಹಿಂಬಾಗ ನೋವು, ಸೋಂಕು ತೀರ್ವತರವಾದಾಗ ವಸಡು, ಮೂಗು, ಕಿವಿಗಳಲ್ಲಿ ರಕ್ತಸ್ರಾವ ಡಾಂಬರು ಬಣ್ಣದ ಮಲವಿಸರ್ಜನೆ, ಚಿಕುನ್‌ಗುನ್ಯದಲ್ಲಿ ಜ್ವರ, ಸಣ್ಣ-ಸಣ್ಣ ಕೀಲುಗಳ ನೋವು, ಮೆದುಳು ಜ್ವರದಲ್ಲಿ ತೀವ್ರತರ ಜ್ವರ, ಜ್ಞಾನ ತಪ್ಪುವುದು, ಆನೇಕಾಲು ರೋಗದಲ್ಲಿ ಕಾಲುಗಳು ಮತ್ತು ವೃಷಣಭಾಗದ ಊತ ಇಂತಹ ಲಕ್ಷಣಗಳು ಕಂಡ ತಕ್ಷಣ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಬೇಕು ಒಂದುವೇಳೆ ಪ್ರಕರಣಗಳು ದೃಢಪಟ್ಟಲ್ಲಿ ಸೂಕ್ತ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುವುದು. ಈ ಮಾಹಿತಿಯನ್ನು ಮಕ್ಕಳಿಗೆ ತಿಳಿಸುವುದರಿಂದ ಅವರು ಪೋಷಕರಿಗೆ ಮಾಹಿತಿ ನೀಡಿ ರೋಗಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಅವರು ಮಾತನಾಡಿ ಸ್ವಯಂ ರಕ್ಷಣಾ ವಿಧಾನ, ಪರಿಸರ ವಿಧಾನ, ಜೈವಿಕ ಮತ್ತು ರಾಸಾಯನಿಕ ವಿಧಾನಗಳಲ್ಲಿ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಬಹುದು.

ಸ್ವಯಂ ರಕ್ಷಣಾ ವಿಧಾನದಲ್ಲಿ ಮೈತುಂಬ ಬಟ್ಟೆ ಧರಿಸುವುದು, ಸಂಜೆ ವೇಳೆ ಬೇವಿನ ಸೊಪ್ಪು ಅಥವಾ ಸಾಂಮ್ರಾಣಿ ಧೂಪ ಹಾಕುವುದು ಮತ್ತು ಕಿಟಕಿ ಬಾಗಿಲುಗಳನ್ನು ಮುಚ್ಚುವುದು, ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು.ಪರಿಸರ ವಿಧಾನದಲ್ಲಿ ನೀರು ಶೇಕರಣೆ ಪರಿಕರಗಳಾದ ಸಿಮೆಂಟ್ ತೊಟ್ಟಿ, ಬ್ಯಾರಲ್, ಮಣ್ಣಿನ ಮಡಿಕೆ ಇವುಗಳನ್ನು ವಾರಕೊಮ್ಮೆ ಸ್ವಚ್ಛಗೊಳಿಸಬೇಕು ಹಾಗೂ ಘನತ್ಯಾಜ್ಯಗಳಾದ ಟೈರು, ಎಳನೀರ ಚಿಪ್ಪು, ಒಡೆದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಅನುಪಯುಕ್ತ ಒರಳುಕಲ್ಲು, ಚರಂಡಿ, ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜೈವಿಕ ವಿಧಾನದಲ್ಲಿ ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಗಪ್ಪಿ ಮತ್ತು ಗ್ಯಾಂಬೋಜಿಯ ಲಾರ್ವ ಹಾನಿ ಮೀನುಗಳನ್ನು ಪಡೆದುಕೊಂಡು ಕನಿಷ್ಠ ಪಕ್ಷ ೬ ತಿಂಗಳು ನೀರು ನಿಲ್ಲುವ ಕೆರೆ, ಕುಂಟ್ಟೆ, ಬಾವಿ, ಕಲ್ಯಾಣಿಗಳಲ್ಲಿ ಬಿಡಲಾಗುವುದು ಈ ಮೀನುಗಳು ಆಹಾರಕ್ಕಾಗಿ ಸೊಳ್ಳೆ ಮೊಟ್ಟೆ ಮತ್ತು ಲಾರ್ವಗಳನ್ನು ತಿನ್ನುತ್ತವೆ. ಜಿಲ್ಲೆಯ ಎಲ್ಲಾ ಆರೋಗ್ಯಸಂಸ್ಥೆಗಳಲ್ಲಿ ಸಿಮೆಂಟ್ ತೊಟ್ಟಿ ನಿರ್ಮಿಸಿ ಗಪ್ಪಿ ಮತ್ತು ಗ್ಯಾಂಬೋಜಿಯ ಮೀನುಗಳನ್ನು ಸಾಕಾಣೆ ಮಾಡುತ್ತಿದ್ದು ಅವಶ್ಯಕತೆಯಿರುವ ಕಡೆ ಬಿಡಲಾಗುತ್ತಿದೆ.

ರಾಸಾಯನಿಕ ವಿಧಾನದಲ್ಲಿ ಅಬೇಟ್ ಮತ್ತು ಫೈರೆತ್ರಮ್ ಎಂಬ ೨ ಬಗೆಯ ರಾಸಾಯನಿಕಗಳನ್ನು ಬಳಸಲಾಗುತ್ತಿದ್ದು ಈಡಿಸ್ ಲಾರ್ವ ಸಮೀಕ್ಷೆ ಮಾಡುವ ವೇಳೆ ಅಬೇಟ್ ದ್ರಾವಣವನ್ನು ಬಳಸಲಾಗುತ್ತದೆ.ಇದರಿಂದ ಸೊಳ್ಳೆ ಮರಿಗಳು ನಾಶವಾಗುತ್ತದೆ.ವಯಸ್ಕ ಸೊಳ್ಳೆಗಳನ್ನು ನಾಶಪಡಿಸಲು ಫೈರೆತ್ರಮ್ ರಾಸಾಯನಿಕ ಬಳಸಿ ಧೂಮೀಕರಣ ಮಾಡಲಾಗುತ್ತದೆ.ಈ ಎಲ್ಲಾ ಮಾಹಿತಿಗಳನ್ನು ತಾವು ಕಾರ್ಯಾಗಾರದಲ್ಲಿ ತಿಳಿದುಕೊಂಡಿದ್ದೀರಿ ಶಾಲೆಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸುವಂತೆ ತಿಳಿಸಿದರು.
ಈ ಕಾರ್ಯಾಗಾರದಲ್ಲಿ ಪ್ರಾಂಶುಪಾಲರಾದ ಬಾಲಕೃಷ್ಣ, ಆರೋಗ್ಯ ಮೇಲ್ವಿಚಾರಕ ರೇಣುಕಯ್ಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಂಜುನಾಥ್, ಪ್ರಕಾಶ್ ಹಾಗೂ ವಿಜ್ಞಾನ ಶಿಕ್ಷಕರು ಹಾಜರಿದ್ದರು.

RELATED ARTICLES
- Advertisment -
Google search engine

Most Popular