ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮಂಡ್ಯೂರಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಒಂದೆರಡು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದೆ. ಹೀಗಾಗಿ ಜನರು ಭಯಭೀತಗೊಂಡಿದ್ದಾರೆ.
ವಿಷ್ಯ ತಿಳಿದು ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಕನ್ಯಾನದಲ್ಲಿ ಈ ಅನುಭವ ಆಗಿದೆ. ಆತಂಕಗೊಂಡ ಇಲ್ಲಿನ ಗ್ರಾಮಸ್ಥರಿಗೆ ಅಧಿಕಾರಿಗಳು
ಧೈರ್ಯ ತುಂಬಿದ್ದಾರೆ.