Friday, April 11, 2025
Google search engine

Homeರಾಜ್ಯಸುದ್ದಿಜಾಲವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ,ನಮ್ಮ ಜೀವನವನ್ನು ರೂಪಿಸಿಕೊಳ್ಳುವ ಶಿಲ್ಪಿ ನಾವೇ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ,ನಮ್ಮ ಜೀವನವನ್ನು ರೂಪಿಸಿಕೊಳ್ಳುವ ಶಿಲ್ಪಿ ನಾವೇ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೆಚ್.ಡಿ.ಕೋಟೆ: ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ ೪೪೩.೬೪ ಕೋಟಿಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದ ಬಳಿಕ ವಾಲ್ಮೀಕಿ ಜಯಂತಿ ಪ್ರಯುಕ್ತ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ನಾವು ಈಗಾಗಲೇ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದು ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಯನ್ನೂ ನೀಡುತ್ತಿದ್ದೇವೆ. ವಾಲ್ಮೀಕಿಯವರು ಸಂಸ್ಕೃತದಲ್ಲಿ ೨೦ ಸಾವಿರ ಶ್ಲೋಕಗಳನ್ನು ರಚಿಸಿದ್ದಾರೆ. ಶೂದ್ರ ವರ್ಗದ ಜನ ವಿದ್ಯೆ ಕಲಿಯುವುದೇ ನಿಷಿದ್ಧವಾಗಿದ್ದ ಕಾಲದಲ್ಲಿ ವಿದ್ಯೆ ಕಲಿತು, ಸಂಸ್ಕೃತವನ್ನೂ ಕಲಿತು ರಾಮಾಯಣ ರಚಿಸಿದ್ದು ಬಹಳ ದೊಡ್ಡ ಹೋರಾಟ ಮತ್ತು ಸಾಧನೆ ಎಂದರು.

ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ವಾಲ್ಮೀಕಿ ಬೇಡ ಸಮುದಾಯದವರು, ಶಾಕುಂತಲ ಬರೆದ ಕಾಳಿದಾಸರು ಕುರುಬ ಸಮುದಾಯದವರು. ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ನಮ್ಮ ಜೀವನವನ್ನು ರೂಪಿಸಿಕೊಳ್ಖುವ ಶಿಲ್ಪಿ ನಾವೇ. ಆದ್ದರಿಂದ ವಿದ್ಯೆ ಕಲಿಯಲೇಬೇಕು. ಶೂದ್ರ ಜಾತಿಯ ಕನಕದಾಸರು ದಾಸಶ್ರೇಷ್ಠರಾದರು. ಆದ್ದರಿಂದ ವಿದ್ಯಾವಂತರಾಗಲು ಜಾತಿ ಅಡ್ಡಿ ಬರುವುದಿಲ್ಲ. ಮೇಲ್ವರ್ಗದವರಿಗೆ ಮಾತ್ರ ವಿದ್ಯೆ ಎನ್ನುವುದನ್ನು ನಮ್ಮಲ್ಲಿ ಬಿತ್ತಿದ್ದಾರೆ. ಇದು ತಪ್ಪು ಎಂದರು.

ನಮ್ಮಪ್ಪ ಚನ್ನಪ್ಪಯ್ಯ ಅನ್ನುವವರ ಮೇಲ್ವರ್ಗದವರ ಮಾತು ಕೇಳಿ, ಕುರುಬರೆಲ್ಲಾ ಲಾಯರ್ ಓದೋಕೆ ಆಗಲ್ಲ ಎನ್ನುತ್ತಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಓದಿ ಲಾಯರ್ ಆದೆ. ಮುಖ್ಯಮಂತ್ರಿಯೂ ಆದೆ ಎಂದರು.

ಇಂದು ನಾವು ಆಚರಿಸುತ್ತಿರುವ ಪ್ರಜಾಪ್ರಭುತ್ವಕ್ಕೆ ವಾಲ್ಮೀಕಿ ಅವರು ಅವತ್ತೇ ಅಡಿಪಾಯ ಹಾಕಿದ್ದರು. ಮಹಾತ್ಮಗಾಂಧಿಯವರು ಹೇಳುವ ರಾಮರಜ್ಯವನ್ನು ವಾಲ್ಮೀಕಿ ಅವರು ರಾಮಾಯಣದಲ್ಲೇ ಚಿತ್ರಿಸಿದ್ದಾರೆ. ಆದರೂ ವಾಲ್ಮೀಕಿ ಅವರು ದರೋಡೆಕೋರ ಆಗಿದ್ದರು ಎಂದೆಲ್ಲಾ ಸುಳ್ಖು ಕತೆ ಸೃಷ್ಟಿಸಿದ್ದಾರೆ. ಇವೆಲ್ಲಾ ನಂಬೋಕೆ ಹೋಗಬೇಡಿ ಎಂದರು.ವಾಲ್ಮೀಕಿ ಮಹಾನ್ ಮೇದಾವಿ, ವಿದ್ಯಾವಂತ ಆಗಿದ್ದ ಎಂದರು.

RELATED ARTICLES
- Advertisment -
Google search engine

Most Popular