Monday, April 21, 2025
Google search engine

Homeಅಪರಾಧನಾರಾಯಣಪುರದಲ್ಲಿ ಎನ್‌ಕೌಂಟರ್: 7 ನಕ್ಸಲರ ಹತ್ಯೆ, 3ಯೋಧರಿಗೆ ಗಾಯ

ನಾರಾಯಣಪುರದಲ್ಲಿ ಎನ್‌ಕೌಂಟರ್: 7 ನಕ್ಸಲರ ಹತ್ಯೆ, 3ಯೋಧರಿಗೆ ಗಾಯ

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲೀಯರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಓರ್ಚಾ ಪ್ರದೇಶದ ಗೋಬೆಲ್ ಮತ್ತು ತುಲ್ತುಲಿ ಗ್ರಾಮಗಳ ಸಮೀಪದ ಕಾಡಿನಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾರಾಯಣಪುರ, ಕೊಂಡಗಾಂವ್, ದಾಂತೇವಾಡ ಮತ್ತು ಬಸ್ತಾರ್ ಜಿಲ್ಲೆಗಳ ಪೊಲೀಸ್ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದ ಸಿಬ್ಬಂದಿ ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್(ಐಟಿಬಿಪಿ) ೪೫ನೇ ಬೆಟಾಲಿಯನ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಎನ್ ಕೌಂಟರ್

RELATED ARTICLES
- Advertisment -
Google search engine

Most Popular