ಕೊಪ್ಪಳ: ಕೊಪ್ಪಳದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ನಿಂದ ಯಾರೇ ಮುಖ್ಯಮಂತ್ರಿ ಆದರೂ ಕರ್ನಾಟಕ ಅಭಿವೃದ್ಧಿಯಾಗುವುದಿಲ್ಲ ಎಂದು ಟೀಕಿಸಿದರು. ರಾಜ್ಯ ಸರ್ಕಾರದ ಆಡಳಿತದಿಂದ ಕರ್ನಾಟಕ ಸಾಲದ ಸುಳಿಯಲ್ಲಿ ಸಿಲುಕಿದೆ ಎಂದರು. ಸಿಎಂ ಯಾರು ಎನ್ನುವುದು ಮುಖ್ಯವಲ್ಲ, ರಾಜ್ಯದ ಪರಿಸ್ಥಿತಿ ಬಗ್ಗೆ ನಾವು ಚಿಂತಿಸುತ್ತಿದ್ದೇವೆ ಎಂದು ವಿಜಯೇಂದ್ರ ಹೇಳಿದರು.



