Sunday, April 20, 2025
Google search engine

Homeಅಪರಾಧಅಬಕಾರಿ ಪ್ರಕರಣ: ಕೇಜ್ರಿವಾಲ್‌ಗೆ ಮತ್ತೆ ೧೪ ದಿನ ನ್ಯಾಯಾಂಗ ಬಂಧನ

ಅಬಕಾರಿ ಪ್ರಕರಣ: ಕೇಜ್ರಿವಾಲ್‌ಗೆ ಮತ್ತೆ ೧೪ ದಿನ ನ್ಯಾಯಾಂಗ ಬಂಧನ

ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರಿಗೆ ರಿಲೀಫ್ ಸಿಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ರೂಸ್ ಅವೆನ್ಯೂ ನ್ಯಾಯಾಲಯವು ಸಧ್ಯ ಅವರನ್ನ ಮತ್ತೆ ೧೪ ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಮೂರು ದಿನಗಳ ಕಸ್ಟಡಿ ವಿಚಾರಣೆ ಮುಗಿದ ನಂತರ ಕೇಜ್ರಿವಾಲ್ ಅವರನ್ನ ಕೇಂದ್ರ ತನಿಖಾ ದಳ (CBI) ನ್ಯಾಯಾಲಯಕ್ಕೆ ಹಾಜರುಪಡಿಸಿತು. ಎಎಪಿ ಮುಖ್ಯಸ್ಥರಿಗೆ ಜೈಲು ಶಿಕ್ಷೆ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನ ವಿಶೇಷ ನ್ಯಾಯಾಧೀಶೆ ಸುನೇನಾ ಶರ್ಮಾ ನೀಡಿದ್ದಾರೆ.

ಅಂದ್ಹಾಗೆ, ತಮ್ಮ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿಯನ್ನ ಸಿಬಿಐ ಬಂಧಿಸಿತ್ತು.

RELATED ARTICLES
- Advertisment -
Google search engine

Most Popular