Monday, April 21, 2025
Google search engine

Homeರಾಜ್ಯಅಬಕಾರಿ ನೀತಿ ಹಗರಣ: ಕವಿತಾ ನ್ಯಾಯಾಂಗ ಬಂಧನ ಜುಲೈ ೩ರವರೆಗೆ ವಿಸ್ತರಣೆ

ಅಬಕಾರಿ ನೀತಿ ಹಗರಣ: ಕವಿತಾ ನ್ಯಾಯಾಂಗ ಬಂಧನ ಜುಲೈ ೩ರವರೆಗೆ ವಿಸ್ತರಣೆ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತ ಬಿಆರ್ ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜುಲೈ ೩ರವರೆಗೆ ವಿಸ್ತರಿಸಿದೆ.

ಇಂದು ಸೋಮವಾರ ಕವಿತಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದರು. ಮಾ.೧೫ರಂದು ಇ.ಡಿ ಕವಿತಾ ಅವರನ್ನು ಬಂಧಿಸಿತ್ತು. ಇವರು ನ್ಯಾಯಾಂಗ ಬಂಧನದಲ್ಲಿ ಇದ್ದ ಅವಧಿಯಲ್ಲೇ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ, ಕವಿತಾ ಅವರನ್ನು ಬಂಧಿಸಿತ್ತು.

RELATED ARTICLES
- Advertisment -
Google search engine

Most Popular