Friday, April 18, 2025
Google search engine

Homeರಾಜ್ಯಸುದ್ದಿಜಾಲಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರುದ್ಧ ಸುಳ್ಳು ದೂರು: ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾಗಳಿಗೆ ಒತ್ತಾಯ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರುದ್ಧ ಸುಳ್ಳು ದೂರು: ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾಗಳಿಗೆ ಒತ್ತಾಯ

ಮೈಸೂರು: ಇತ್ತೀಚೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರುದ್ಧ ಸುಳ್ಳು ದೂರು ನೀಡಿರುವ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸರಕಾರಿ ನೌಕರರ ಜಿಲ್ಲಾಧ್ಯಕ್ಷ ಜೆ.ಗೋವಿಂರಾಜು  ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಒತ್ತಾಯಿಸಿದ್ದಾರೆ.

ಸಂಘದ ವಿರುದ್ದ ದೂರು ನೀಡಿರುವ ಎನ್ ಪಿಎಸ್ ನೌಕರರು ಸೇರಿದಂತೆ  ರಾಜ್ಯ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ  ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ದೂರು ನೀಡಿರುವ ಐದು ಮಂದಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

ಇದ ವೇಳೆ ಜಿಲ್ಲಾಧಿಕಾರಿ ಸಹಾಯಕಿ ಕವಿತಾ ರಾಜಾರಾಂ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ರೇವಣ್ಣ, ಖಜಾಂಚಿ ಸಿ.ಎಸ್ ರಮೇಶ್ ಕುಮಾರ್, ಉಪಾಧ್ಯಕ್ಷ ರಮೇಶ್,  ಹುಣಸೂರು ತಾ. ಅಧ್ಯಕ್ಷ ಎಸ್.ಗೋವಿಂದೇಗೌಡ, ಶಿಕ್ಷಕ ಟಿ.ಸತೀಶ್ ಜವರೇಗೌಡ ಹಾಗೂ ಹಲವಾರು ಸರಕಾರಿ ನೌಕರರರು ಇದ್ದರು.

RELATED ARTICLES
- Advertisment -
Google search engine

Most Popular