ಮಂಡ್ಯ: ಕೆಆರ್ ಎಸ್ ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ ಜಿಲ್ಲೆಯಲ್ಲಿ ಕಾವೇರಿಯ ಕಿಚ್ಚು ಕಾವೇರಿದ್ದು, ಶ್ರೀರಂಗಪಟ್ಟಣದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ.
ರೈತ ಹೋರಾಟಗಾರ ನಂಜುಂಡೇಗೌಡ ನೇತೃತ್ವದಲ್ಲಿ ಮೈಸೂರು -ಬೆಂಗಳೂರು ಹೆದ್ದಾರಿ ತಡೆದು ರೈತರು ನೀರು ಬಿಟ್ಟ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ಡ್ಯಾಂ ನಿಂದ ಬಿಡುತ್ತಿರುವ ನೀರು ನಿಲ್ಲಿಸಲು ರೈತರು ಒತ್ತಾಯಿಸಿದ್ದಾರೆ.