Sunday, April 20, 2025
Google search engine

Homeಅಪರಾಧಮಂಡ್ಯದಲ್ಲಿ ಮಳೆಗೆ ಮೊದಲ ಬಲಿ: ಕಾರಿನ ಮೇಲೆ ಮರ ಬಿದ್ದು ಯುವಕ ಸಾವು

ಮಂಡ್ಯದಲ್ಲಿ ಮಳೆಗೆ ಮೊದಲ ಬಲಿ: ಕಾರಿನ ಮೇಲೆ ಮರ ಬಿದ್ದು ಯುವಕ ಸಾವು

ಮಂಡ್ಯ: ಮಂಡ್ಯದಲ್ಲಿ ಮಳೆಗೆ ಮೊದಲ ಬಲಿಯಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆಗೆ ಮರಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜಿಲ್ಲಾಸ್ಪತ್ರೆ ರಸ್ತೆಯ ಶಿಲ್ಪಶ್ರೀ ಆಸ್ಪತ್ರೆ ಬಳಿ ನಡೆದಿದೆ.

ಮಂಡ್ಯ ತಾಲೋಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್ (27) ಮೃತ ಯುವಕ.

ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಆರೋಗ್ಯ ವಿಚಾರಿಸಿ ಕಾರ್ತಿಕ್ ವಾಪಾಸ್ಸಾಗುತ್ತಿದ್ದ ವೇಳೆ ಬಿರುಗಾಳಿ ಸಹಿತ ಭಾರೀ ಮಳೆ ಹಿನ್ನೆಲೆ ಬೈಕ್ ನಿಲ್ಲಿಸಿ ಸ್ನೇಹಿತನ ಕಾರು ಹತ್ತಿ ಕುಳಿತಿದ್ದ. ಈ ವೇಳೆ ಮರದ ಕೆಳಗೆ ಕಾರು ನಿಲ್ಲಿಸಿದ್ದರಿಂದ ಕಾರು ಮೇಲೆಯೆ ಬಾರಿ ಗಾತ್ರದ ಮರ ಬಿದ್ದಿದೆ.

ಈ ಹಿನ್ನಲೆ ಸ್ಥಳದಲ್ಲೇ ಕಾರ್ತಿಕ್ ಸಾವನ್ನಪ್ಪಿದ್ದು, ಕಾರಿನ ಹೊರಗಡೆ ನಿಂತಿದ್ದ ಸ್ನೇಹಿತ ಪಾರಾಗಿದ್ದಾರೆ.

ನಾಳೆ ಕಾರ್ತಿಕ್ ಹುಟ್ಟು ಹಬ್ಬವಿತ್ತು. ಹೊಸ ಬಟ್ಟೆ ಖರೀದಿಸಿ, ತಂದೆ ಆರೋಗ್ಯ ವಿಚಾರಿಸಿಕೊಂಡು ತೆರಳುವಾಗ ದುರ್ಘಟನೆ ಸಂಭವಿಸಿದೆ. ಕಾರ್ತಿಕ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಸ್ಥಳಕ್ಕೆ ಪೊಲೀಸರು, ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದು, ಕ್ರೇನ್ ಸಹಾಯದಿಂದ ಮರ ತೆರವು ಕಾರ್ಯ ಆರಂಭಿಸಿದ್ದಾರೆ.

ಮಂಡ್ಯ ಮಿಮ್ಸ್ ಶವಗಾರಕ್ಕೆ ಮೃತ ಯುವಕನ ಶವ ರವಾನಿಸಲಾಗಿದೆ.

ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular