ಬೆಂಗಳೂರು : ಮತ್ತೆ ರಾಜ್ಯ ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ಚರ್ಚೆ ಗರಿಗೆದರಿದ್ದು, ಡಿಕೆ ಶಿವಕುಮಾರ್ ಅವರನ್ನ ಸಿಎಂ ಸ್ಥಾನದಲ್ಲಿ ನೋಡ್ಬೇಕು ಅನ್ನೋದು ಸಹೋದರ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಅವರ ಬಹುದೊಡ್ಡ ಕನಸಾಗಿದೆ. ಇದೇ ಪ್ರಯತ್ನದಲ್ಲಿದ್ದಾರೆ ಡಿಕೆ ಬ್ರದರ್ಸ್ ಇದ್ದು, ರಾಜ್ಯಕ್ಕೆ ರಾಹುಲ್ ಗಾಂಧಿ ಬಂದು ಹೋದ ಮೇಲೆ ಡಿಕೆ ಸಹೋದರರಿಗೆ ಬಲ ಬಂದಂತಾಗಿದ್ಯಾ ಎಂಬ ಪ್ರಶ್ನೆ ಮೂಡಿಸಿದೆ.
ಈ ಹಿನ್ನಲೆ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ್ ಪೋಸ್ಟ್ ಬಳಿಕ ಡಿಕೆ ಸುರೇಶ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ಹೊಸದೊಂದು ಹಿಂಟ್ ಕೊಟ್ಟಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಬೆನ್ನಲ್ಲೇ ಮಾಜಿ ಸಂಸದ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ಶೇರ್ ಮಾಡಿದ್ದು, ಯಶಸ್ಸಿನ ಮೊದಲ ಹೆಜ್ಜೆಯೇ ಪ್ರಯತ್ನ, ಸತತ ಪ್ರಯತ್ನದ ಫಲವೇ ಯಶಸ್ಸು ಎಂದು ಬರೆದು ಡಿಕೆ ಸುರೇಶ್ ಪೋಸ್ಟ್ ಮಾಡಿದ್ದು ಹೊಸ ಚರ್ಚೆಗೆ ಕಾರಣವಾಗಿದೆ.

ಈ ಮೊದಲು ಡಿಕೆ ಶಿವಕುಮಾರ್ ಅವರು ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲವಾಗಲ್ಲ ಎಂದು ಪೋಸ್ಟ್ ಮಾಡಿದ್ದರೂ ಈ ಬೆನ್ನಲ್ಲೇ ಡಿಕೆ ಸುರೇಶ್ ಪೋಸ್ಟ್ ಮಾಡಿದ್ದು ಅಣ್ಣ-ತಮ್ಮನ ಈ ಪೋಸ್ಟ್ ಭಾರೀ ಕುತೂಹಲ ಮೂಡಿಸಿದೆ. ನಾಯಕತ್ವದ ಬದಲಾವಣೆ ಚರ್ಚೆ ಜೋರಾಗಿರುವ ಸಮಯದಲ್ಲೇ ಡಿಕೆ ಬ್ರದರ್ ಪೋಸ್ಟ್ ಕಿಚ್ಚು ಹೆಚ್ಚಿಸುವಂತಿದೆ ಎನ್ನಲಾಗುತ್ತಿದೆ.
ರಾಹುಲ್ ಗಾಂಧಿ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಮನದಲ್ಲಿ ಮತ್ತೆ ಸಿಎಂ ಕುರ್ಚಿ ಆಸೆ ಚಿಗುರಿದಂತೆ ಕಾಣ್ತಿದ್ದು, ಅದಕ್ಕೆ ಈ ಪೋಸ್ಟ್ ಸಾಕ್ಷಿ ಎಂಬಂತಿದೆ. ಸಿಎಂ ಕುರ್ಚಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಗುಡಿ-ಗೋಪುರ ಸುತ್ತಿ ಪ್ರಾರ್ಥನೆ ಸಲ್ಲಿಸಿದ್ದು, ಈ ಪ್ರಾರ್ಥನೆ ಶೀಘ್ರವೇ ಫಲಿಸುತ್ತಾ ಎನ್ನುವ ಪ್ರಶ್ನೆ ಮೂಡಿದೆ. ರಾಹುಲ್ ಗಾಂಧಿ ಮೈಸೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಪಕ್ಕಕ್ಕೆ ಕರೆದು ಪ್ರತ್ಯೇಕವಾಗಿ ಕೆಲ ನಿಮಿಷಗಳ ಮಾತಾಡಿದ್ದಾರೆ ಎನ್ನಲಾಗ್ತಿದ್ದು, ಶೀಘ್ರವೇ ದೆಹಲಿಗೆ ಡಿಸಿಎಂ ಕರೆಸಿ ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.



