Wednesday, April 16, 2025
Google search engine

Homeರಾಜ್ಯಕಾಡಾನೆ ದಾಳಿ: ಅಕ್ಕ ಬಲಿ, ತಂಗಿಗೆ ಗಂಭೀರ ಗಾಯ

ಕಾಡಾನೆ ದಾಳಿ: ಅಕ್ಕ ಬಲಿ, ತಂಗಿಗೆ ಗಂಭೀರ ಗಾಯ

ರಾಮನಗರ: ಜಮೀನಿಗೆ ತೆರಳುತ್ತಿದ್ದ ಸಹೋದರಿಯರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ, ಅಕ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂಗಿ ಗಂಭೀರ ಗಾಯಗೊಂಡ ಘಟನೆ ಕನಕಪುರ ತಾಲೂಕಿನ ಅಚ್ಚಲು ಗ್ರಾಮದ ಇಂದಿರಾನಗರದಲ್ಲಿ ನಡೆದಿದೆ.

ಜಯಮ್ಮ (50) ಮೃತ ಮಹಿಳೆಯಾಗಿದ್ದು, ವೆಂಕಲಕ್ಷ್ಮಮ್ಮಗೆ (45) ಗಂಭೀರ ಗಾಯಗೊಂಡ ಮಹಿಲೆ ಎಂದು ತಿಳಿದು ಬಂದಿದೆ.

ಜಮೀನಿನಲ್ಲಿ ಎಳ್ಳು ಕೊಯ್ಯಲು ಹೋಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಗಾಯಾಳು ವೆಂಕಟಲಕ್ಷ್ಮಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular