Friday, April 11, 2025
Google search engine

Homeರಾಜ್ಯಸುದ್ದಿಜಾಲಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧನ

ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ಚಿಕಿತ್ಸೆ ಫಲಿಸದೇ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಮನೋಹರ ತಹಶೀಲ್ದಾರ ಅವರು ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ, ಕಾರ್ಯಕರ್ತರು, ಅಭಿಮಾನಿಗಳನ್ನು ಅಗಲಿದ್ದಾರೆ.

ಸಂಸದ ಬಸವರಾಜ ಬೊಮ್ಮಾಯಿ ಅವರು ಇತ್ತೀಚಿಗೆ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮನೋಹರ್ ತಹಶೀಲ್ದಾರ್​ ಅವರ ಆರೋಗ್ಯ ವಿಚಾರಿಸಿದ್ದರು.

ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಮಾಜಿ ಶಾಸಕ ಮನೋಹರ್ ತಹಶಿಲ್ದಾರ ಅವರು 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರಿದ್ದರು.

ಸಾರ್ವಜನಿಕರ ದರ್ಶನಕ್ಕೆ ಅವಕಾಶ
ಮಾಜಿ ಸಚಿವ ಮನೋಹರ ತಹಶೀಲ್ದಾರ ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 12 ಗಂಟೆಯಿಂದ ಹಾನಗಲ್ಲ ಪಟ್ಟಣದ ಎನ್‌ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಶುಕ್ರವಾರ ಅವರ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

RELATED ARTICLES
- Advertisment -
Google search engine

Most Popular