Friday, June 20, 2025
Google search engine

Homeರಾಜ್ಯಸರಕಾರದ ನಿರ್ಧಾರದಿಂದ ಎಸ್‍ಸಿ, ಎಸ್‍ಟಿ, ಒಬಿಸಿ ಜನರ ಮೀಸಲಾತಿಗೆ ಧಕ್ಕೆ: ಪ್ರಲ್ಹಾದ್ ಜೋಶಿ

ಸರಕಾರದ ನಿರ್ಧಾರದಿಂದ ಎಸ್‍ಸಿ, ಎಸ್‍ಟಿ, ಒಬಿಸಿ ಜನರ ಮೀಸಲಾತಿಗೆ ಧಕ್ಕೆ: ಪ್ರಲ್ಹಾದ್ ಜೋಶಿ

ಬೆಂಗಳೂರು: ವಸತಿ ಇಲಾಖೆಯ ವಿವಿಧ ಮನೆ ಹಂಚಿಕೆ ಯೋಜನೆಗಳಲ್ಲಿ ಶೇ 15ರಷ್ಟು ಮುಸಲ್ಮಾನರಿಗೆ ಹಂಚಿಕೆ ಮಾಡಲು ಮುಂದಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದಿಂದ ಸಾಮಾನ್ಯ ಜನರು, ಎಸ್‍ಸಿ, ಎಸ್‍ಟಿ, ಒಬಿಸಿ ಜನರ ಮೀಸಲಾತಿಗೆ ಧಕ್ಕೆ ಆಗಲಿದೆ; ಇದು ಖಂಡನೀಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ವಸತಿ ಯೋಜನೆಗಳಡಿ ಮುಸ್ಲಿಮರಿಗೆ ಶೇ 15 ಮೀಸಲಾತಿ ನೀಡಿದೆ. ಯಾವುದೇ ಮಾದರಿಯ ಧರ್ಮಾಧಾರಿತ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅದು ಸಂವಿಧಾನವಿರೋಧಿ ಎಂದೂ ತಿಳಿಸಿದೆ ಎಂದು ವಿವರಿಸಿದರು.

ಇದೊಂದು ಅಸಾಂವಿಧಾನಿಕ, ಸಂವಿಧಾನ ವಿರೋಧಿ ತೀರ್ಮಾನ ಎಂದು ಅವರು ಟೀಕಿಸಿದರು. ಸಿದ್ದರಾಮಯ್ಯ ಮತ್ತು ಕಂಪೆನಿಯು ಗುತ್ತಿಗೆಯಲ್ಲಿ ಶೇ 4 ಮೀಸಲಾತಿ ನೀಡಲು ನಿರ್ಧರಿಸಿತ್ತು. ಇದು ದೇಶದಲ್ಲಿ ಎಲ್ಲೂ ಇಲ್ಲದ ದುಸ್ಸಾಹಸವಾಗಿತ್ತು. ಈಗ ವಸತಿ ಯೋಜನೆಗಳಡಿ ಶೇ 15ರಷ್ಟು ಮೀಸಲಾತಿ ನೀಡಲು ನಿರ್ಧಾರ ಮಾಡಿದೆ ಎಂದು ಆರೋಪಿಸಿದರು.

ವಸತಿ ಯೋಜನೆಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಹಣ ಬರುತ್ತದೆ ಎಂದು ವಿವರಿಸಿದರು. ಸರಕಾರವು ತುಷ್ಟೀಕರಣದ ರಾಜಕಾರಣದಲ್ಲಿ ಇತರ ಸಮುದಾಯಗಳಿಗೆ ಅನ್ಯಾಯ ಮಾಡಿ, ಸಂವಿಧಾನವಿರೋಧಿ, ಧರ್ಮಾಧಾರಿತ ಮೀಸಲಾತಿಯನ್ನು ಕೊಡುತ್ತಿದ್ದಾರೆ. ಇದನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ. ಅಗತ್ಯ ವಿಷಯಗಳನ್ನು ಪರಿಶೀಲಿಸಿ ಕಾನೂನಿನ ಹೋರಾಟದ ಸಂಬಂಧ ಚಿಂತನೆ ಮಾಡುತ್ತೇವೆ ಎಂದು ಪ್ರಕಟಿಸಿದರು.

RELATED ARTICLES
- Advertisment -
Google search engine

Most Popular