ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತ ಮರುಕಳಿಸಬಾರದು ಎಂಬ ಕಾರಣದಿಂದಾಗಿ, ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಮಂಗಳವಾರ, ಕರ್ನಾಟಕ ಪೊಲೀಸ್ ಇಲಾಖೆ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಈ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಹಬ್ಬಗಳು, ಮೆರವಣಿಗೆಗಳು, ಪ್ರತಿಭಟನೆಗಳು, ಕ್ರೀಡಾ ಕೂಟಗಳು ಸೇರಿದಂತೆ ಹೆಚ್ಚು ಜನ ಸೇರುವ ಎಲ್ಲ ಕಾರ್ಯಕ್ರಮಗಳಿಗೆ ಈ ಮಾರ್ಗಸೂಚಿ ಅನ್ವಯವಾಗುತ್ತದೆ.
ಸಾರ್ವಜನಿಕ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶವಿರುವ ಈ ನಿಯಮಗಳು ತಕ್ಷಣದಿಂದ ಜಾರಿಗೆ ಬರುವಂತಿವೆ.