Saturday, May 16, 2026
Google search engine

Homeಸ್ಥಳೀಯಬಿಡದಿ ಟೌನ್‌ಶಿಪ್‌ಗೆ ಹೆಚ್.ಡಿ ದೇವೇಗೌಡ ರಿಂದ ತೀವ್ರ ವಿರೋಧ

ಬಿಡದಿ ಟೌನ್‌ಶಿಪ್‌ಗೆ ಹೆಚ್.ಡಿ ದೇವೇಗೌಡ ರಿಂದ ತೀವ್ರ ವಿರೋಧ

ಬೆಂಗಳೂರು : ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ವಿರೋಧ ವ್ಯಕ್ತಪಡಿಸಿದ್ದು, ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ ಎಂದು ಗುಡುಗಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಬಿಡದಿ ಬಳಿ ಹೋಗೋಣ ನಾನು ಬರುತ್ತೇನೆ. ಸಿಎಂ ಸಿದ್ದರಾಮಯ್ಯ ನೀವು ಬನ್ನಿ.ಇದುವರೆವಿಗೂ ಸ್ಥಳೀಯ ಶಾಸಕರು, ತಹಶೀಲ್ದಾರ್ ಜನರ ಸಮಸ್ಯೆಯನ್ನು ಕೇಳಿಲ್ಲ. ಸಿಎಂ ಸಿದ್ದರಾಮಯ್ಯ ನನ್ನ ಹಳೆಯ ಸ್ನೇಹಿತರು.  ಇದೊಂದು ದಂಧೆ.  ರೈತರ ಜಮೀನನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ. ಕನಕಪುರದಲ್ಲಿ ಎಷ್ಟು ಜಮೀನು ವಶಪಡಿಸಿಕೊಂಡಿದ್ದಾರೆಂಬ ಮಾಹಿತಿ ಇದೆ ಎಂದು  ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಸ್ಥಳಕ್ಕೆ ಹೋಗುತ್ತೇನೆ.  ರೈತರು ಹೊಡೆದರೂ ಹೊಡೆಸಿಕೊಳ್ಳುತ್ತೇನೆಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಕೌಂಟರ್ ಕೊಟ್ಟ ಹೆಚ್ ಡಿ ದೇವೇಗೌಡರು, ಅವರು ಹೋಗಿ ರೈತರಿಂದ ಹೊಡೆಸಿಕೊಂಡು ಬರಲಿ  ಅ ಮೇಲೆ ಮಾತನಾಡುತ್ತೇನೆ ಎಂದರು.

RELATED ARTICLES
- Advertisment -
Google search engine

Most Popular