ಹನೂರು: ಹನೂರು ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸಪೆಕ್ಟರ್ ಆಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ರಾಜೇಂದ್ರಪ್ರಸಾದ್ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹನೂರು ಪೋಲಿಸ್ ಠಾಣೆಯಲ್ಲಿ ನಡೆಯಿತು.
ಈ ವೇಳೆ ಇನ್ಸಪೆಕ್ಟರ್ ಶಶಿಕುಮಾರ್ ನೇತೃತ್ವದಲ್ಲಿ ಅವರಿಗೆ ಸನ್ಮಾನಿಸಿ ಗೌರವಿಸಿ ಬಿಳ್ಕೊಡುಗೆ ನೀಡಲಾಯಿತು.
ಈ ವೇಳೆ ಇನ್ಸಪೆಕ್ಟರ್ ಶಶಿಕುಮಾರ್ ಮಾತನಾಡಿ ಸಬ್ ಇನ್ಸಪೆಕ್ಟರ್ ರಾಜೇಂದ್ರ ಪ್ರಸಾದ್ ರವರ ನಿವೃತ್ತಿ ಜೀವನವು ಸುಖಕರವಾಗಿರಲಿ ಹಾಗೂ ಅವರ ಆರೋಗ್ಯವು ಚೆನ್ನಾಗಿರಲಿ ಎಂದು ತಿಳಿಸಿದರು.
ಈ ವೇಳೆ ಹನೂರು ಪೋಲಿಸ್ ಠಾಣೆಯಿಂದ ರಾಮಪುರ ಪೋಲಿಸ್ ಠಾಣೆಗೆ ವರ್ಗಾವಣೆಯಾದ ಮಹಿಳಾಪೇದೆ ಶೋಭರವರಿಗೂ ಸಹ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಎಎಸ್ ಎ ಕೃಷ್ಣ, ಪೇದೆಗಳಾದ ರಾಘವೇಂದ್ರ, ಈಶ್ವರ್, ರಾಜು,ಪ್ರಭು, ಮೂರ್ತಿ, ಸುರೇಶ್ ಸೇರಿದಂತೆ ಹಲವರು ಹಾಜರಿದ್ದರು.