Monday, April 14, 2025
Google search engine

Homeರಾಜ್ಯಎಸ್ ​ಸಿಪಿ ಅನುದಾನದ ಸಮರ್ಪಕ ಬಳಕೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಹೆಚ್.ಸಿ.ಮಹದೇವಪ್ಪ

ಎಸ್ ​ಸಿಪಿ ಅನುದಾನದ ಸಮರ್ಪಕ ಬಳಕೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಹೆಚ್.ಸಿ.ಮಹದೇವಪ್ಪ

ಬೆಂಗಳೂರು: ಎಸ್ ​ಸಿಪಿ ಯೋಜನೆಯಡಿಯಲ್ಲಿನ ಎಲ್ಲಾ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಇರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕೆಂದು ಸರ್ಕಾರದ ಎಲ್ಲಾ ಇಲಾಖೆಗಳ ಉನ್ನತ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್​.ಸಿ ಮಹದೇವಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇಂದು ವಿಕಾಸ ಸೌಧದಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, ಪರಿಶಿಷ್ಟ ಜಾತಿಯ ಜನರ ಶಿಕ್ಷಣ, ಆರೋಗ್ಯ, ಆಹಾರ, ಕೌಶಲ್ಯ ತರಬೇತಿಯೊಂದಿಗೆ ಅವರ ಘನತೆಯುಕ್ತ ಬದುಕಿಗೆ ಪೂರಕವಾಗಿ ಆಡಳಿತವನ್ನು ನೀಡಬೇಕೆಂದು ತಿಳಿಸಿದರು.

ಪರಿಶಿಷ್ಟ ಜಾತಿ ವರ್ಗದ ಜನರ ಏಳಿಗೆಗಾಗಿ ಈ ಹಿಂದೆ ಜಾರಿಗೊಳಿಸಲಾಗಿದ್ದ ಎಸ್​ಇಪಿ ಕಾಯ್ದೆಯ ಹಣವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿರುವುದು ಎಸ್ ​ಸಿಪಿ ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿದ್ದು, ಈ ಕಾಯ್ದೆಯ ನಿಯಮಾವಳಿಯಂತೆ ಎಸ್ ​ಸಿಪಿ ಕಾಯ್ದೆಯ ಹಣವನ್ನು ಪರಿಶಿಷ್ಟ ಜಾತಿಯ ಜನರ ಏಳಿಗೆಗೆ ಮಾತ್ರವೇ ಬಳಸಬೇಕು ಎಂದು ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕಾಯ್ದೆಗಳನ್ನು ಮಾಡುವುದು ಜನರ ಅನುಕೂಲಕ್ಕಾಗಿಯೇ ಹೊರತು ಕಾಯ್ದೆಯನ್ನು ಉಲ್ಲಂಘಿಸಲು ಅಲ್ಲ. ಈ ಹಿನ್ನಲೆಯಲ್ಲಿ ಎಸ್​ಇಪಿ ಕಾಯ್ದೆಯಡಿ ನಿಗದಿ ಪಡಿಸಿರುವ ಅನುದಾನವನ್ನು ಎಲ್ಲಾ ಇಲಾಖೆಗಳು ಸಮರ್ಪಕವಾಗಿ ಬಳಸಿಕೊಂಡು ಜನರ ಬದುಕಿಗೆ ಸಹಾಯ ಮಾಡಬೇಕು. ಇದರ ಜೊತೆಗೆ ಎಲ್ಲಾ ಇಲಾಖೆಗಳು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದರು.

ಅತ್ಯಂತ ಮುಖ್ಯವಾಗಿ ಯಾವುದೇ ಕಾರಣಕ್ಕೂ ಎಸ್ ​ಸಿಪಿ ಕಾಯ್ದೆಯ ಹಣವನ್ನು ಬೇರೆಡೆಗೆ ವರ್ಗಾಯಿಸದೇ ಪರಿಶಿಷ್ಟ ಜಾತಿಯ ಜನರ ಏಳಿಗೆಗೆ ಬಳಸಬೇಕು ಮತ್ತು ಯೋಜನೆಯ ಅನುಕೂಲಗಳು ಮಧ್ಯವರ್ತಿಗಳನ್ನು ದಾಟಿ ನಿಜವಾದ ಫಲಾನುಭವಿಗಳಿಗೆ ದೊರಕಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಎಲ್ಲಾ ಇಲಾಖೆಗಳಲ್ಲಿ ಎಸ್ ​ಸಿಪಿ ಉದ್ದೇಶಕ್ಕಾಗಿ ಇರುವ ಅನುದಾನದ ಬಳಕೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆಯನ್ನು ನಡೆಸಿದರು.

RELATED ARTICLES
- Advertisment -
Google search engine

Most Popular