ಹೆಚ್.ಡಿ.ಕೋಟೆ: ಹೆಚ್.ಡಿ.ಕೋಟೆಯ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ದಿನ ಜಾಗೃತಿ ಜಾಥಾ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯ ಕ್ರಮವನ್ನು ಈ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ.ಸುವರ್ಣ ಮತ್ತು ತಹಶೀಲ್ದಾರ್ ಶ್ರೀನಿವಾಸ್, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರವಿಕುಮಾರ್. ಟಿ. ಮತ್ತು ಸಾರ್ವಜನಿಕ ಆಸ್ಪತ್ರೆ ಯ ಆಡಳಿತ ವೈದ್ಯಾಧಿಕಾರಿಗಳಾದ ಡಾ ಸೋಮಣ್ಣ ರವರು ಹಸಿರು ನಿಶಾನೆ ತೋರುವುದರ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆಯನ್ನು ನೀಡಿದರು.

ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಈ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ನುಡಿದರು.
ನಂತರ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು ಮಾತನಾಡಿ, ರಾಷ್ಟ್ರೀಯ ಡೆಂಗ್ಯೂ ದಿನ ವನ್ನು ಮೇ ತಿಂಗಳಲ್ಲಿ ಯಾಕೇ ಆಚರಣೆ ಮಾಡುತ್ತೀವಿ ಎಂದರೆ, ಮೇ ತಿಂಗಳಲ್ಲಿ ಹೆಚ್ಚಾಗಿ ಮಳೆ ಬರುವುದರಿಂದ ಸೊಳ್ಳೆಗಳು ಹೆಚ್ಚು ಉತ್ಪತ್ತಿಯಾಗುತ್ತದೆ. ಎಂದು ತಿಳಿಸಿದರು.
ಡೆಂಗ್ಯೂ ಒಂದು ಮಾರಕ ಕಾಯಿಲೆ ,ಡೆಂಗ್ಯೂ ಮತ್ತು ಚಿಕುಂಗುನ್ಯಾ ಕಾಯಿಲೆಯು ಈಡಿಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಈ ರೋಗವು ಹರಡುತ್ತದೆ, ಈ ಸೊಳ್ಳೆಯು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ ಎಂದು ತಿಳಿಸಿದರು.
ಈ ರೋಗದ ಮುಖ್ಯ ಲಕ್ಷಣಗಳು. ತೀವ್ರ ಜ್ವರ, ವಿಪರೀತ ತಲೆನೋವು ಕಣ್ಣುಗುಡ್ಡೆ ಹಿಂಭಾಗದಲ್ಲಿ ವಿಪರೀತನೋವು, ಮಾಂಸ ಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳುತ್ತದೆ ಎಂದು ತಿಳಿಸಿದರು.
ಈ ರೋಗ ಲಕ್ಷಣಕ್ಕೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು,ಈ ಸೊಳ್ಳೆಗಳ ನಿಯಂತ್ರಣ ದಿಂದ ಡೆಂಗ್ಯೂ ರೋಗದ ಹತೋಟಿ ಸಾಧ್ಯ, ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಅಂದರೆ ಮನೆಯ ಒಳಗೆ ಹಾಗೂ ಹೊರಗೆ ನೀರು ಶೇಖರಿಸುವ ತೊಟ್ಟಿ, ಮಣ್ಣಿನ ಮಡಿಕೆ, ಉಪಯೋಗಿಸಿದ ಬರಳು ಕಲ್ಲುಗಳು, ತಟ್ಟೆಗಳು, ಪೇಪರ್ ಲೋಟಗಳು, ಬಳಸಿದ ಟೈರುಗಳು,ಎಳ ನೀರು ಚಿಪ್ಪುಗಳು, ಘನ ತ್ಯಾಜ್ಯ ವಸ್ತುಗಳಲ್ಲಿ, ವಾಸಿಸುತ್ತವೆ, ಆದುದರಿಂದ ನೀರು ನಿಲ್ಲದಂತೆ ಎಚ್ಚರಿಸಬೇಕು ಎಂದರು.
ಮುಂಜಾಗ್ರತ ಕ್ರಮಗಳು: ಎಲ್ಲಾ ನೀರಿನ ತೊಟ್ಟಿಗಳು, ಡ್ರಮ್ ಗಳು, ಬ್ಯಾರೆಲ್ ಗಳು, ಏರ್ ಕೂಲರ್ ಗಳು, ಇತ್ಯಾದಿಗಳನ್ನು ವಾರಕ್ಕೆ ಒಮ್ಮೆ ಖಾಲಿ ಮಾಡಿ ಉಜ್ಜಿ ತೊಳೆದು ಒಣಗಿಸಿ ಮತ್ತೆ ನೀರು ಭರ್ತಿ ಮಾಡಿಕೊಳ್ಳಬೇಕು, ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳನೀರು ಚಿಪ್ಪು, ಮರದ ಪೂಟ್ಟರೆ ,ಒಡೆದ ಬಾಟಲು, ಕುಡಿದು ಬಿಸಡಿದ ಪ್ಲಾಸ್ಟಿಕ್ ಲೋಟ , ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸಿ ಸೂಕ್ತ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.
ಸ್ವಯಂರಕ್ಷಣಾ ವಿಧಾನಗಳಾದ ಸೊಳ್ಳೆ ಪರದೆ ಬಳಸುವುದು, ಮೈತುಂಬ ಬಟ್ಟೆ ಧರಿಸುವುದು, ಆರೋಗ್ಯ ಇಲಾಖೆ ಹಮ್ಮಿಕೊಂಡ ಸೊಳ್ಳೆ ನಿಯಂತ್ರಣ ಕ್ರಮಗಳಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು. ನಂತರ ಅಧ್ಯಕ್ಷತೆಯನ್ನು ವಹಿಸಿದ್ದ ತಹಶೀಲ್ದಾರ್ ರವರು ಮಾತನಾಡಿ ನಮ್ಮ ತಾಲ್ಲೂಕಿನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಚನ್ನಾಗಿ ಕರ್ತವ್ಯ ವನ್ನೂ ನಿರ್ವಹಿಸುತ್ತ ಬಂದಿದ್ದೀರಿ, ಇನ್ನು ಮುಂದೇನು ಸಹ ಇದೇ ರೀತಿ ಕರ್ತವ್ಯ ವನ್ನು ನಿರ್ವಹಿಸಿ ನಮ್ಮ ತಾಲೂಕಿನಲ್ಲಿ ಯಾವುದೇ ಸಾಂಕ್ರಮಿಕ ರೋಗಗಳು ಹರಡದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಗಳ ಕಚೇರಿಯ ಮೇಲ್ವಿಚಾರಕರಾದ ,ಬಸವರಾಜು ,ಜಯರಾಂ , ವರ್ಗದವರಾದ ನಾಗೇಂದ್ರ ರವಿರಾಜ್ ಸರಳ ಅಶೋಕ್,ಅರಾಲಪ್ಪ,ಶರಣಪ್ಪ,ಪ್ರಶಾಂತ್, ಲಕ್ಷ್ಮಿ ಭಟ್ ,ರೇಖಾ,ಪ್ರಾಥಮಿಕ ಆರೋಗ್ಯ ಕೇಂದ್ರದ ,ಆರೋಗ್ಯ ನಿರೀಕ್ಷಣಾಧಿಕಾರಿಗಳು, , ಸಮುದಾಯ ಆರೋಗ್ಯ ಅಧಿಕಾರಿಗಳು,ಆಶಾ ಕಾರ್ಯಕರ್ತೆಯರು, ಸೆಂಟ್ ಮೇರಿಸ್ ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳು , ಇನ್ನಿತರರು ಹಾಜರಿದ್ದರು.