Saturday, April 19, 2025
Google search engine

Homeರಾಜ್ಯಎಚ್ .ಡಿ ಕುಮಾರಸ್ವಾಮಿ ರಾಜಕೀಯ ಮಹತ್ವಾಕಾಂಕ್ಷೆಯಿಂದ ಬೈ ಎಲೆಕ್ಷನ್ ಬಂತು: ಸಿಪಿ ಯೋಗೇಶ್ವರ್ ಕಿಡಿ

ಎಚ್ .ಡಿ ಕುಮಾರಸ್ವಾಮಿ ರಾಜಕೀಯ ಮಹತ್ವಾಕಾಂಕ್ಷೆಯಿಂದ ಬೈ ಎಲೆಕ್ಷನ್ ಬಂತು: ಸಿಪಿ ಯೋಗೇಶ್ವರ್ ಕಿಡಿ

ರಾಮನಗರ: ಈ ಉಪಚುನಾವಣೆ ಬರುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಎಚ್ ಡಿ ಕುಮಾರಸ್ವಾಮಿ ರಾಜಕೀಯ ಮಹತ್ವಾಕಾಂಕ್ಷೆಯಿಂದ ಬೈ ಎಲೆಕ್ಷನ್ ಬಂತು. ಎಂಎಲ್‌ಎ ಆಗಿ ಅವರು ಒಮ್ಮೆಯೂ ಕ್ಷೇತ್ರಕ್ಕೆ ಬಂದಿಲ್ಲ. ಮೊನ್ನೆ 150 ಕೆರೆ ತುಂಬಿಸಿದ್ದೇವೆ ಎನ್ನುತ್ತಿದ್ದರು. ಅವರಿಗೆ ಚನ್ನಪಟ್ಟಣದಲ್ಲಿ ಎಷ್ಟು ಕೆರೆ ಇದೆ ಅಂತ ಗೊತ್ತಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಕಿಡಿಕಾರಿದ್ದಾರೆ.

ಕೋಡಂಬಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಸಮನ್ವಯ ಸಭೆ ನಡೆಸಿ ಮಾತನಾಡಿದ ಅವರು ಈ ರೀತಿ ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ಕಿಡಿಕಾರಿದ್ದಾರೆ. ಹಣ ಸುರಿದು ಚುನಾವಣೆ ಮಾಡೋದು ಕುಮಾರಸ್ವಾಮಿಗೆ ಇರುವ ಒಂದೇ ಅಸ್ತ್ರ. ನನ್ನ ಬಳಿ ಹಣ ಇಲ್ಲ, ಎರಡು ಬಾರಿ ಸೋತಿದ್ದೇನೆ ಎಂದರು.

ಜನರೇ ನನ್ನ ಪರವಾಗಿ ಚುನಾವಣೆ ಮಾಡುತ್ತಾರೆ. ಎಲ್ಲರೂ ಯಾಕೆ ಕಾಂಗ್ರೆಸ್ ಬಿಟ್ಟು ಹೋಗಿದ್ರಿ ಎಂದು ಕೇಳುತ್ತಾರೆ. ಅವತ್ತು ನೀರಾವರಿ ಯೋಜನೆಗಾಗಿ ಪಕ್ಷ ಬಿಟ್ಟು ಹೋಗಿದ್ದೆ. ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಪಕ್ಷಾಂತರ ಮಾಡಿದ್ದೇನೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular