ಮೈಸೂರು: ಎನ್ ಡಿ ಎ ಸರ್ಕಾರದಲ್ಲಿ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಸಂಸದರಾದ ಹೆಚ್ ಡಿ ಕುಮಾರಸ್ವಾಮಿ ರವರು ಕೇಂದ್ರ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮೈಸೂರು ನಗರ ಜೆಡಿಎಸ್ ಕಾರ್ಯಧ್ಯಕ್ಷರದ ಪ್ರಕಾಶ್ ಪ್ರಿಯದರ್ಶನ್ ರವರು ಕೈಯಲ್ಲಿ ಕರ್ಪೂರ ಬೆಳಗುವ ಮೂಲಕ ವಿಶೇಷವಾಗಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಜಯ್ ಶಾಸ್ತ್ರಿ, ಬೈರತಿ ಲಿಂಗರಾಜು, ಸುಚಿಂದ್ರ, ಹಾಗೂ ಇನ್ನಿತರರು ಸಂಭ್ರಮಿಸಿದರು.