ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಅಲ್ಪ ಬಿಡುವು ಕೊಟ್ಟಿದ್ದ ಮಳೆರಾಯ ನಿನ್ನೆ ಸಂಜೆ ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಮಂಗಳೂರು ನಗರದ ಯಾವ ರಸ್ತೆಗೆ ಹೋದರೂ ನೀರೇ ನೀರು. ಈ ಮಧ್ಯೆ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಅವಘಡ ಸಂಭವಿಸಿರುವಂತಹ ಘಟನೆ ಕಂಕನಾಡಿ ಬಳಿಯ ಸುವರ್ಣ ಲೇನ್ನಲ್ಲಿ ನಡೆದಿದೆ ಎನ್ನಲಾಗಿದೆ. ಕೂದಳೆಲೆ ಅಂತರದಲ್ಲಿ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಂಪೌಂಡ್ ಕುಸಿಯುವ ರಣಭೀಕರ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎದೆನಡುಗಿಸುತ್ತಿದೆ.