Tuesday, July 7, 2026
Google search engine

Homeರಾಜ್ಯಭಾರೀ ಮಳೆ ಹಿನ್ನೆಲೆ : ನಾಳೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಭಾರೀ ಮಳೆ ಹಿನ್ನೆಲೆ : ನಾಳೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ.

ಭಾರೀ ಮಳೆಯ ಮುನ್ನೆಚ್ಚರಿಕೆಯಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಸೇರಿದಂತೆ ಮಳೆಯ ತೀವ್ರತೆ ಹೆಚ್ಚಿರುವ ತಾಲ್ಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ಸತತ ಮಳೆಯಿಂದಾಗಿ ಕರಾವಳಿ ಮತ್ತು ಮಲೆನಾಡಿನ ನದಿಗಳು, ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.

ಮಳೆ ಬಿರುಸುಗೊಂಡಿರುವುದರಿಂದ ಕೃಷ್ಣಾ, ಘಟಪ್ರಭಾ ಮತ್ತು ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಪಶ್ಚಿಮ ಘಟ್ಟಗಳ ಮಲೆನಾಡು ಭಾಗದಲ್ಲಿ ಮತ್ತು ಹೆದ್ದಾರಿಗಳ ಪಕ್ಕದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಸಾರ್ವಜನಿಕರು ಅನಗತ್ಯವಾಗಿ ನದಿ, ಹಳ್ಳ ಹಾಗೂ ಜಲಪಾತಗಳ ಬಳಿ ಹೋಗಬಾರದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಗೆ ಜಿಲ್ಲಾಡಳಿತದ ಸಹಾಯವಾಣಿಯನ್ನು ಸಂಪರ್ಕಿಸಲು ಕೋರಲಾಗಿದೆ.

RELATED ARTICLES
- Advertisment -
Google search engine

Most Popular