Friday, April 18, 2025
Google search engine

Homeಅಪರಾಧಕಾನೂನುಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಈಗಾಗಲೇ ಹೈಕೋರ್ಟ್ ಅನುಮತಿ ನೀಡಿದ್ದು, ಇದೀಗ ಕೆಂಗೇರಿಯಿಂದ ಮೈಸೂರುವರೆಗೆ ನಡೆಯುವ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಬಿಜೆಪಿ ಪಾದಯಾತ್ರೆಗೆ ಅನುಮತಿಗಾಗಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಿಟ್ ಅರ್ಜಿ ಸಲ್ಲಿಸಿದ್ದರು. ಆ. 3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆಗೆ ಅನುಮತಿ ಕೇಳಿದರೂ ಸರ್ಕಾರ ಪ್ರತಿಕ್ರಿಯಿಸಿಲ್ಲ. ಹೀಗಾಗಿ ಅನುಮತಿ ನೀಡಲು ನಿರ್ದೇಶಿಸುವಂತೆ ಹೈಕೋರ್ಟ್​​ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್​ನಲ್ಲಿ ಈ ಅರ್ಜಿ ವಿಚಾರಣೆಗೆ ಬರುವ ಮೊದಲೆ ಸರಕಾರ ಪಾದಯಾತ್ರೆಗೆ ಅನುಮತಿ ನೀಡಿದೆ. ಇದೀಗ ಕೋರ್ಟ್, ಕಾನೂನು ಪ್ರಕಾರ ಪಾದಯಾತ್ರೆ ಭದ್ರತೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ರಾಮನಗರ, ಮಂಡ್ಯ ಎಸ್ಪಿ ಹಾಗೂ ಮೈಸೂರು ಪೊಲೀಸ್​ರಿಗೆ ಸೂಚಿಸಿದೆ.

RELATED ARTICLES
- Advertisment -
Google search engine

Most Popular