ಮಂಡ್ಯ: ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಐವರಿಗೆ ಗಾಯವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಭಾನುವಾರ ನಡೆದಿದೆ.
ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ಕೆಎಸ್ಆರ್ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಕಾರಿನಲ್ಲಿದ್ದವರು ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದವರು ಎಂದು ಹೇಳಲಾಗುತ್ತಿದೆ.
ಗಾಯಾಳುಗಳಿಗೆ ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ಗೆ ರವಾನೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.