Wednesday, June 11, 2025
Google search engine

Homeಅಪರಾಧಮಂಗಳೂರಿನಲ್ಲಿ ಭೀಕರ ಅಪಘಾತ: ಸ್ಕೂಟರ್ ಗೆ ಟ್ಯಾಂಕರ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಮಂಗಳೂರಿನಲ್ಲಿ ಭೀಕರ ಅಪಘಾತ: ಸ್ಕೂಟರ್ ಗೆ ಟ್ಯಾಂಕರ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಮಂಗಳೂರು (ದಕ್ಷಿಣ ಕನ್ನಡ) :ಸ್ಕೂಟರ್ ಗೆ ಟ್ಯಾಂಕರ್ ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸಹಸವಾರ ಟ್ಯಾಂಕರ್‌ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಗೊಂಡಿರುವ ಘಟನೆ ಮಂಗಳೂರು ನಗರದ ಪಣಂಬೂರು ಪೆಟ್ರೋಲ್ ಪಂಪ್ ಬಳಿ ರಾತ್ರಿ ನಡೆದಿದೆ.

ಮೃತರನ್ನು ಅಶ್ರಫ್ ಎಂದು ಗುರುತಿಸಲಾಗಿದೆ. ಇನ್ನು ಮುಹಮ್ಮದ್ ಶರೀಫ್ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಶ್ರಫ್ ಮತ್ತು ಶರೀಫ್ ಅವರು ಮಂಗಳೂರು ಕಡೆಯಿಂದ ಸುರತ್ಕಲ್‌ ಕಡೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಾಸನದಿಂದ ಸುರತ್ಕಲ್ ಎಚ್ ಪಿಸಿಎಲ್ ಗೆ ಗ್ಯಾಸ್ ತುಂಬಲು ಹೋಗುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ‌ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular