Saturday, May 2, 2026
Google search engine

Homeಅಪರಾಧವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಬೆಂಗಳೂರು: ವರದಕ್ಷಿಣೆ ಕಿರುಕುಳ ತಾಳಲಾಗದೇ ಗೃಹಿಣಿಯೊಬ್ಬಳು ತನ್ನ ಮೂರು ತಿಂಗಳ ಮಗು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಬೆಟ್ಟದಾಸನಪುರ ಮೂಲದ 23 ವರ್ಷದ ವಂದನಾ ಮೃತಪಟ್ಟ ದುರ್ದೈವಿ. ಕಳೆದ ಮೂರು ವರ್ಷಗಳ ಹಿಂದೆ ಹುಳಿಮಾವಿನ ನಿವಾಸಿಯಾಗಿದ್ದ ವಿಕ್ರಂ ಶೇಷ ಎಂಬಾತನೊಂದಿಗೆ ವಂದನಾ ವಿವಾಹವಾಗಿದ್ದರು. ಮದುವೆಯಾದ ಆರಂಭದಿಂದಲೂ ಪತಿ ವಿಕ್ರಂ ಹಾಗೂ ಆತನ ಮನೆಯವರು ಹಣಕ್ಕಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ ನಿರಂತರವಾಗಿ ಆಕೆಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿದೆ. ಗುರುವಾರ ಸಂಜೆ ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಸಮೀಪವಿರುವ ಮನೆಯಲ್ಲಿ ಅನುಮಾನಾಸ್ಪದವಾಗಿ ವಂದನಾ ಸಾವನ್ನಪ್ಪಿದ್ದಾರೆ. ಈ ದಂಪತಿಗೆ ಮೂರು ತಿಂಗಳ ಮಗು ಕೂಡ ಇದೆ.

ಈ ಸಾವಿನ ಹಿಂದೆ ಪತಿ ಹಾಗೂ ಆತನ ಕುಟುಂಬದವರ ಕೈವಾಡವಿದೆ ಎಂದು ಮೃತಳ ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಘಟನಾ ಸ್ಥಳದಲ್ಲಿ ಫ್ಯಾನ್‌ನ ರೆಕ್ಕೆಗಳಿಗೆ ಸೀರೆ ಸಿಲುಕಿಕೊಂಡಿದ್ದು, ಅಂತಹ ಸ್ಥಿತಿಯಲ್ಲಿ ನೇಣು ಬಿಗಿದುಕೊಳ್ಳಲು ಸಾಧ್ಯವೇ ಇಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಕಿರುಕುಳದ ಸಂಬಂಧ ಪೊಲೀಸರು ಇಬ್ಬರು ಕುಟುಂಬದವರ ನಡುವೆ ರಾಜಿ ಸಂಧಾನಕ್ಕೆ ಪ್ರಯತ್ನಿಸಿದ್ದರು. ಆದರೆ ಕಠಿಣ ಕ್ರಮ ಕೈಗೊಂಡಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಸದ್ಯ ಬೆಟ್ಟದಾಸನಪುರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ವಂದನಾಳ ಗಂಡ ಹಾಗೂ ಆತನ ಕುಟುಂಬಕ್ಕೆ ಕಠಿಣ ಶಿಕ್ಷೆಯಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular