Sunday, April 20, 2025
Google search engine

Homeಅಪರಾಧಕಾನೂನುಯಾವುದೇ ತನಿಖೆ ಎದುರಿಸಲು ನಾನು ತಯಾರಿದ್ದೇನೆ : ಸಿಎಂ ಸಿದ್ದರಾಮಯ್ಯ

ಯಾವುದೇ ತನಿಖೆ ಎದುರಿಸಲು ನಾನು ತಯಾರಿದ್ದೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಯಾವುದೇ ತನಿಖೆ ಎದುರಿಸಲು ನಾನು ತಯಾರಿದ್ದೇನೆ ಎಂದು ಹೇಳಿದ್ದಾರೆ. ನಾವು ಯಾವುದಕ್ಕೂ ಹೆದರಲ್ಲ, ತನಿಖೆಗೆ ನಾವು ತಯಾರಿದ್ದೇವೆ ಎಂದರು.

ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ನಿನ್ನೆ ಹೈಕೋರ್ಟ್ ೧೭ಎ ಅನ್ವಯ ತನಿಖೆ ನಡೆಸುವಂತೆ ಆದೇಶಿಸಿತ್ತು. ಹೈಕೋರ್ಟ್ ಆದೇಶ ಮೇಲೆ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ. ಕೋರ್ಟ್ ತೀರ್ಪಿನ ಪ್ರತಿ ಸಿಕ್ಕಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಪೂರ್ಣ ಆದೇಶದ ಪ್ರತಿ ಸಿಕ್ಕಿದ ಬಳಿಕ ವಕೀಲರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular