Friday, April 18, 2025
Google search engine

Homeರಾಜ್ಯಸುದ್ದಿಜಾಲಕುಶಲಕರ್ಮಿಗಳ ವೃತ್ತಿ ಸದೃಢಗೊಳಿಸಲು ಪಿ.ಎಂ ವಿಶ್ವಕರ್ಮ ಯೋಜನೆ ಜಾರಿ : ಬಿ.ವೈ.ರಾಘವೇಂದ್ರ

ಕುಶಲಕರ್ಮಿಗಳ ವೃತ್ತಿ ಸದೃಢಗೊಳಿಸಲು ಪಿ.ಎಂ ವಿಶ್ವಕರ್ಮ ಯೋಜನೆ ಜಾರಿ : ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಪ್ರಧಾನಿಯವರು ದೇಶದಲ್ಲಿರುವ ಕುಶಲಕರ್ಮಿಗಳಿಗೆ ಅವರ ವೃತ್ತಿಯನ್ನು ಸದೃಢಗೊಳಿಸಲು ದಿನಾಂಕ ೧೭-೦೯-೨೦೨೩ ಪಿ.ಎಂ.ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿರುತ್ತಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿವಮೊಗ್ಗ ಜಿಲ್ಲಾ ಚಿನ್ನ-ಬೆಳ್ಳಿ ವೃತ್ತಿಗಾರರ ಹಿತಾರಕ್ಷಣಾ ಸಮಿತಿ ಆಶ್ರಯದಲ್ಲಿ, ಜಿಲ್ಲಾ ಕೈಗಾರಿಕಾ ಕೇಂದ್ರ ಶಿವಮೊಗ್ಗ ಹಾಗೂ ಸಾಮಾನ್ಯ ಸೇವಾ ಕೇಂದ್ರ ರವರ ಸಹಕಾರದೊಂದಿಗೆ ಇಂದು ಗಾಂಧಿ ಬಜಾರಿನ ಬಸವೇಶ್ವರ ದೇವಸ್ಥಾನ ಸಭಾಂಣದಲ್ಲಿಂದು ಏರ್ಪಡಿಸಲಾಗಿದ್ದ ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ಯೋಜನೆಯಡಿ ಕುಶಲಕರ್ಮಿಗಳಿಗೆ “ಪಿ.ಎಂ.ವಿಶ್ವಕರ್ಮ’ ಕಾರ್ಡ್ ವಿತರಣೆ, ತರಬೇತಿ, ಉಪಕರಣಗಳ ಕಿಟ್, ಪೊರೀತ್ಸಾಹ, ಮೊದಲ ಹಂತದಲ್ಲಿ ರೂ. ೬ ಲಕ್ಷ, ೨ನೇ ಹಂತದಲ್ಲಿ ರೂ.೨ ಲಕ್ಷದವರೆಗಿನ ಸಾಲವನ್ನು ಬ್ಯಾಂಕಿನ ಮೂಲಕ ಕೇವಲ ಶೇಕಡ ೫ ರಷ್ಟು ಬಡ್ಡಿ ದರದಲ್ಲಿ ನೀಡಲಾಗುವುದು. ಶಾಸಕ ಎಸ್. ಎನ್. ಚನ್ನಬಸಪ್ಪನವರು ಮಾತನಾಡಿ ಇಂದು ಶಿವಮೊಗ್ಗದ ಗಾಂಧಿ ಬಜಾರ್‍ನ ಬಸವೇಶ್ವರ ದೇವಸ್ಥಾನದಲ್ಲಿ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಂತೆ ಜಿಲ್ಲೆಯಾದ್ಯಂತ ಇನ್ನೂ ಹೆಚ್ಚಿನ ಸಂಘ ಸಂಸ್ಥೆಗಳು ನೋಂದಣಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲಿ. ಈ ಯೋಜನೆಯಡಿ ಎಲ್ಲ ವರ್ಗದ ಕುಶಲಕರ್ಮಿಗಳು ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಚಿನ್ನ-ಬೆಳ್ಳಿ ವರ್ತಕರ ಸಂಘದ ಅಧ್ಯಕ್ಷ ಎಸ್ ರಮೇಶ್, ಕಾರ್ಯದರ್ಶಿ ಸೋಮೇಶ್ ಪಿ. ಶೇಟ್, ಕಾಳಿಕಾ ಪರಮೇಶ್ವರಿ ಸೊಸೈಟಿಯ ಅಧ್ಯಕ್ಷರು, ಮಾಲತೇಶ್, ಗುರುಶೇಟ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್ ಗಣೇಶ್, ಉಪ ನಿರ್ದೇಶಕ ವೀರೇಶ ನಾಯ್ಕ ರವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

RELATED ARTICLES
- Advertisment -
Google search engine

Most Popular