ಮೈಸೂರು : ಮೈಸೂರು ದಸರಾ ಚಲನಚಿತ್ರ ಉಪಸಮಿತಿ ವತಿಯಿಂದ ಅಕ್ಟೋಬರ್ ೩ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ “ದಸರಾ ಚಲನಚಿತ್ರೋತ್ಸವ-೨೦೨೪ ರ ಉದ್ಘಾಟನಾ ಸಮಾರಂಭ”ವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಸಮಾಜ ಕಲ್ಯಾಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪನವರು ಉದ್ಘಾಟನೆ ಮಾಡಲಿದ್ದಾರೆ.
ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟರಾದ ರಮೇಶ್ ಅರವಿಂದ್, ಡಾಲಿ ಧನಂಜಯ್, ಚಲನಚಿತ್ರ ನಿರ್ಮಾಪಕರಾದ ಯೋಗೇಶ್ ದ್ವಾರಕೀಶ್, ನಟಿಯರಾದ ಸಪ್ತಮಿ ಗೌಡ, ಶರಣ್ಯ ಶೆಟ್ಟಿ, ಅಕ್ಷಿತ ಬೋಪಯ್ಯ ಅವರು ಸಮಾರಂಭದ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಬೆಳಗ್ಗೆ ೯ ಗಂಟೆಯಿಂದ ಸಾಧುಕೋಕಿಲ ತಂಡದಿಂದ ಹಾಸ್ಯ ಮತ್ತು ಮನರಂಜನಾ ಕಾರ್ಯಕ್ರಮ ಇರಲಿದೆ.