ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಸಾಮಾಜಿಕ ಜಾಲತಾಣ ಎಕ್ಸ್ (ಹಳೆಯ ಟ್ವಿಟ್ಟರ್)ನಲ್ಲಿ ತಮ್ಮ ಸಂದೇಶವನ್ನು ಹಂಚಿಕೊಂಡಿದ್ದಾರೆ.
ಟ್ವೀಟ್ ಮೂಲಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಿಶ್ವಕ್ಕೆ ಭಾರತ ನೀಡಿದ ಅನನ್ಯ ಕಾಣಿಕೆ ಯೋಗ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿಡುವುದರ ಜೊತೆಗೆ ವ್ಯಕ್ತಿಯನ್ನು ಸದಾ ಚೈತನ್ಯಯುತವಾಗಿರುವಂತೆ ಮಾಡುತ್ತದೆ.
ನಮ್ಮ ಪೂರ್ವಜರು ಬಳುವಳಿಯಾಗಿ ನೀಡಿದ ಯೋಗವೆಂಬ ಅಮೂಲ್ಯ ಸಾಧನದ ಮೂಲಕ ಸ್ವಸ್ಥ, ಸುಂದರ ಬದುಕು ಕಟ್ಟಿಕೊಳ್ಳೋಣ. ಸರ್ವರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು ಎಂದು ತಿಳಿಸಿದ್ದಾರೆ.