ಹುಬ್ಬಳ್ಳಿ: ಮುಖ್ಯಮಂತ್ರಿ ಹಾಗೂ ಉಪಮುಖ್ಯಂತ್ರಿ ಆಯ್ಕೆ ವಿಷಯದಲ್ಲಿ ಅಧಿಕಾರ ಇರೋದು ಶಾಸಕರಿಗೆ. ನಮ್ಮಂತಹ ಧರ್ಮಗುರುಗಳು ಈ ವಿಚಾರದಲ್ಲಿ ಮೂಗು ತೂರಿಸೋದು ಸರಿಯಲ್ಲ ಎಂದು ಕೂಡಲಸಂಗಮದ ಪಂಚಮಸಾಲಿ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಇಂದು ಗರುವಾರ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜಕಾರಣಿಗಳು ಸಲಹೆ ಕೇಳಿದಾಗ ಧರ್ಮಗುರುಗಳು ಸಲಹೆ ಕೊಡಬೇಕು. ಆದರೆ ಇಂತಹವರನ್ನೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮಾಡಿ ಎಂದು ಹೇಳೋದು ಸರಿಯಲ್ಲ. ಯಾರನ್ನಾದರೂ ಸಿಎಂ ಮಾಡಲಿ, ಡಿಸಿಎಂ ಮಾಡಲಿ. ನಮಗೆ ೨ಂ ಮೀಸಲಾತಿ ಕೊಡಲಿ ಎಂದು ಒತ್ತಾಯಿಸಿದ್ದಾರೆ.
ವಿನಯ ಕುಲಕರ್ಣಿ, ಹೆಬ್ಬಾಳ್ಕರ್ ಅವರು ಸಿಎಂಗೆ ಬಹಳ ಸಲ ಹೇಳಿದ್ದಾರೆ. ಆದರೂ ಸಿದ್ದರಾಮಯ್ಯ ಸಭೆ ಕರೆದಿಲ್ಲ. ಕಲಬುರಗಿಯಲ್ಲಿ ಸಮಾವೇಶ ಮಾಡಿದ್ದೆವು, ಅದೂ ಉಪಯೋಗಕ್ಕೆ ಬರಲಿಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗ ಯತ್ನಾಳ್ ಧ್ವನಿ ಎತ್ತಿದ್ದರು, ನಂತರ ಯಡಿಯೂರಪ್ಪ ಅವರು ಸಭೆ ಕರೆದಿದ್ದರು ಅವಾಗಲು ಆಗಲಿಲ್ಲ.
ಬೊಮ್ಮಾಯಿ ಸಹ ಸಿಎಂ ಆಗಿದ್ದಾಗ ಸಭೆ ಕರೆದಿದ್ದರು. ಆದರೆ ಸಿದ್ದರಾಮಯ್ಯ ಅವರು ಇನ್ನೂ ಮೀಟಿಂಗ್ ಕರೆದಿಲ್ಲ. ನಮ್ಮ ಸಮುದಾಯದ ಶಾಸಕರ ಭಾವನೆಗಳನ್ನು ಸರ್ಕಾರ ಅರ್ಥ ಮಾಡಿಕೊಬೇಕು. ಸಮಾಜವನ್ನು ೧೦೦ ವರ್ಷದಿಂದ ಕೆಲವರು ದುರುಪಯೋಗ ಮಾಡಿಕೊಂಡಿದ್ದಾರೆ. ನಮ್ಮ ಹೋರಾಟವನ್ನು ಕೆಲವರು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.