Saturday, April 19, 2025
Google search engine

Homeರಾಜಕೀಯಜೆಡಿಎಸ್‌ನ ಶಾಸಕರು ಪಕ್ಷ ನಿಷ್ಠೆ ಉಳ್ಳವರು, ಯಾರೂ ಪಕ್ಷ ಬಿಡಲ್ಲ: ಸಿ ಎಂ ಇಬ್ರಾಹಿಂ

ಜೆಡಿಎಸ್‌ನ ಶಾಸಕರು ಪಕ್ಷ ನಿಷ್ಠೆ ಉಳ್ಳವರು, ಯಾರೂ ಪಕ್ಷ ಬಿಡಲ್ಲ: ಸಿ ಎಂ ಇಬ್ರಾಹಿಂ

ಬೆಂಗಳೂರು : ಎರಡು ರಾಷ್ಟ್ರೀಯ ಪಕ್ಷಗಳು ಏನೇ ಕಸರತ್ತು ನಡೆಸಲಿ. ನಮ್ಮ ಪಕ್ಷದ ೧೯ ಮಂದಿ ಶಾಸಕರು ಪಕ್ಷದ ನಿಷ್ಠೆ ಉಳ್ಳವರಾಗಿದ್ದು, ಯಾರೂ ಕೂಡ ಜೆಡಿಎಸ್ ಬಿಡುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಅವರು ಆಪರೇಷನ್ ಹಸ್ತ ಎಂಬ ಮಾತಿಗೆ ಪ್ರತಿಕ್ರಿಯಿಸಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಶಾಸಕರು ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಜೆಡಿಎಸ್ ಉಳಿಸಲು ಪ್ರಯತ್ನ ಮಾಡುತ್ತಿದ್ದೇವೆ. ಹಿರಿಯ ನಾಯಕ ಜಿ.ಟಿ ದೇವೇಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ ಮಾಡಿದ್ದೇವೆ. ಎಲ್ಲ ಜಿಲ್ಲೆಗಳಿಗೆ ಕಮಿಟಿ ಭೇಟಿ ಕೊಟ್ಟು ವರದಿ ನೀಡುತ್ತದೆ. ಎಲ್ಲೆಲ್ಲಿ ಬದಲಾವಣೆ ಆಗಬೇಕಿದೆ. ಅದನ್ನು ಜಾರಿ ಮಾಡುತ್ತೇವೆ. ಹಲವಾರು ಕಡೆ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಸೇರ್ಪಡೆ ಆಗುತ್ತಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಬೇಕು ಅಂತ ಸೇರ್ಪಡೆ ಆಗುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಮಾವೇಶ ಮಾಡಲು ತೀರ್ಮಾನ ಮಾಡಿದ್ದೇವೆ. ಸೆಪ್ಟೆಂಬರ್ ೧ ರಂದು ಕೋರ್ ಕಮಿಟಿ ಸಭೆ ನಡೆಸಿ ಸಮಾವೇಶದ ರೂಪುರೇಷ ಸಿದ್ಧಪಡಿಸುತ್ತೇವೆ ಎಂದು ಹೇಳಿದರು.

ಪಕ್ಷದ ಕಚೇರಿ ಜೆ. ಪಿ ಭವನದಲ್ಲಿ ಇಂದು ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ ೧೦ರಂದು ನಗರದ ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ ಏರ್ಪಡಿಸಲಾಗಿದೆ. ಸುಮಾರು ೨೦ ಸಾವಿರ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ. ಅದಕ್ಕಾಗಿ ಎಲ್ಲಾ ಜಿಲ್ಲೆಗಳಿಂದ ಕಾರ್ಯಕರ್ತರು ಬರಬೇಕೆಂದು ಮನವಿ ಮಾಡಿದ ಗೌಡರು, ಈ ೯೧ ರ ವಯಸ್ಸಿನಲ್ಲೂ ಕೆಲಸ ಮಾಡುತ್ತಿದ್ದೇನೆ. ಯಾರೂ ನನ್ನನ್ನು ಕೈಬಿಡಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular