ಚಾಮರಾಜನಗರ: ಜುಲೈ 13 ರಂದು ಜಿಲ್ಲಾ ಹಾಗೂ ಎಲ್ಲಾ ತಾಲೂಕು ನ್ಯಾಯಾಲಯಗಳಲ್ಲಿ ಮೆಗಾ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಬಿ.ಎಸ್. ಭಾರತಿ ಅವರು ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ಅನ್ನು ಚಾಮರಾಜನಗರ ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲದ ನ್ಯಾಯಾಲಯಗಳಲ್ಲಿ ಬೈಟಕ್ಗಳನ್ನು ಏರ್ಪಡಿಸಿ ಸಂಧಾನಕಾರರನ್ನು ನೇಮಿಸಿ ಆ ಮೂಲಕ ಲೋಕ್ ಅದಾಲತ್ನ್ನು ಆಯಾ ನ್ಯಾಯಾಲಯದಲ್ಲಿ ನಡೆಸಲಾಗುತ್ತದೆ. ಕಳೆದ ಬಾರಿ (ಮಾರ್ಚ್ 16) ನಡೆದ ಲೋಕ್ ಅದಾಲತ್ನಲ್ಲಿ ಸಿವಿಲ್, ಕ್ರಿಮಿನಲ್ ಹಾಗೂ ಪಿಎಲ್ಸಿ ಸೇರಿದಂತೆ ಒಟ್ಟು 33037 ಪ್ರಕರಣಗಳನ್ನು ಇತ್ಯರ್ಥಕ್ಕೆ ಗುರಿ ಹೊಂದಲಾಗಿತ್ತು. ಈ ಪೈಕಿ 31267 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಈ ಬಾರಿಯ ಲೋಕ್ ಅದಾಲತ್ ನಲ್ಲಿ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.
ಹಿಂದಿನ ಲೋಕ್ ಅದಾಲತ್ನಲ್ಲಿ ವಕೀಲರು, ಕಕ್ಷಿದಾರರು, ಪೆÇಲೀಸರು, ವಿಮಾ ಕಂಪನಿಗಳು ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಲೋಕ್ ಅದಾಲತ್ ಯಶಸ್ವಿಯಾಗಿ ನಡೆದಿತ್ತು. ಜುಲೈ 13ರಂದು ನಡೆಯುವ ಲೋಕ್ ಅದಾಲತ್ನಲ್ಲಿ ಗರಿಷ್ಠ ಪ್ರಮಾಣದ ಪ್ರಕರಣಗಳು ಇತ್ಯರ್ಥವಾಗುವ ನಿರೀಕ್ಷೆ ಇದೆ. ಆ ಬಗ್ಗೆ ಪೂರ್ವಭಾವಿ ಸಮಾಲೋಚನೆಗಳು ಪ್ರತಿ ನ್ಯಾಯಾಲಯಗಳಲ್ಲಿ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಈಗಾಗಲೇ ನಡೆಯುತ್ತಿದೆ. ಈ ಬಾರಿಯೂ ಸಹ ಲೋಕ್ ಅದಾಲತ್ ಯಶಸ್ವಿಗೆ ವಕೀಲರು, ಕಕ್ಷಿದಾರರು, ಪೆÇಲೀಸರು, ವಿಮಾ ಕಂಪನಿಗಳು ಹಾಗೂ ವಿವಿಧ ಇಲಾಖೆಗಳು ಅಗತ್ಯ ಸಹಕಾರವನ್ನು ನೀಡುವಂತೆ ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಲೋಕ್ ಅದಾಲತ್ನಲ್ಲಿ ಸಂಧಾನಕಾರರು ನೀಡುವ ಸಲಹೆಗಳನ್ನು ಆಲಿಸಿ, ಪರಸ್ಪರ ಒಪ್ಪಿಗೆಯಾದಲ್ಲಿ ಪ್ರಕರಣವನ್ನು ಲೋಕ್ ಅದಾಲತ್ನಲ್ಲಿ ಬಗೆಹರಿಸಿಕೊಳ್ಳಬಹುದು. ಇದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುತ್ತದೆ ಮತ್ತು ಪಕ್ಷಾಕಾರರ ನಡುವೆ ಬಾಂಧವ್ಯ ಉತ್ತಮವಾಗಿರುತ್ತದೆ ಎಂದರು.
ಲೋಕ್ ಅದಾಲತ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು ಹೊರತುಪಡಿಸಿ, ಇತರೆ ಯಾವುದೇ ರೀತಿಯ ಸಿವಿಲ್ ಪ್ರಕರಣಗಳು, ದಾಂಪತ್ಯ ಹಕ್ಕುಗಳ ಪುನರ್ ಸ್ಥಾಪನೆ, ಜೀವನಾಂಶ, ಮಕ್ಕಳ ಸಂರಕ್ಷಣೆ, ವಾಹನ ಅಪಘಾತ, ಕೈಗಾರಿಕಾ ವಿವಾದ ಕಾಯ್ದೆ ಹಾಗೂ ಇತರೆ ಎಲ್ಲಾ ಸ್ವರೂಪದ ಪ್ರಕರಣಗಳು ಮತ್ತು ರಾಜೀ ಯೋಗ್ಯ ಕ್ರಿಮಿನಲ್ ಪ್ರಕರಣಗಳು, ವಿಶೇಷ ಕಾನೂನಿನಿಂದ ಶಿಕ್ಷಿಸಲ್ಪಡುವ ಅಪರಾಧಗಳಾದ ಚೆಕ್ಕು ಅಮಾನ್ಯ, ಕಾರ್ಮಿಕ ಕಾಯ್ದೆಯಡಿ ಪ್ರಕರಣಗಳು, ವಿದ್ಯುತ್ ಕಳವಿಗೆ ಸಂಬಂಧಿಸಿದ ಪ್ರಕರಣಗಳು, ಅಕ್ರಮ ಕಲ್ಲು, ಮರಳು ಸಾಗಾಣಿಕೆಗೆ ಸಂಬಂಧಪಟ್ಟ ಅಪರಾಧಗಳು, ಇತರೆ ಯಾವುದೇ ಅಪರಾಧಿಕ ಸ್ವರೂಪದ ರಾಜೀ ಯೋಗ್ಯ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ಲೋಕ್ ಅದಾಲತ್ನಲ್ಲಿ ರಾಜೀ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಯಾವುದೇ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ರಾಜೀ ಯೋಗ್ಯ ಪ್ರಕರಣಗಳಲ್ಲಿ ಪಕ್ಷಕಾರರು ಸಂಬಂಧಪಟ್ಟ ನ್ಯಾಯಾಲಯಕ್ಕೆ ಜುಲೈ 13ರಂದು ನಡೆಯಲಿರುವ ಲೋಕ್ ಅದಾಲತ್ಗೆ ಪ್ರಕರಣವನ್ನು ವರ್ಗಾಯಿಸಲು ಮನವಿ ಸಲ್ಲಿಸಿದ್ದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್ನ ಮುಂದೆ ಕಳುಹಿಸಲಾಗುತ್ತದೆ. ನಿಗದಿಯಾಗಿರುವ ಪ್ರಕರಣಗಳನ್ನು ಮುಂಗಡ ಅರ್ಜಿಯನ್ನು ಸಲ್ಲಿಸುವ ಮುಖಾಂತರ ಲೋಕ್ ಅದಾಲತ್ನಲ್ಲಿ ತರಿಸಿಕೊಂಡು ವ್ಯಾಜ್ಯ ಇತ್ಯರ್ಥಕ್ಕೆ ಪ್ರಯತ್ನಿಸುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ. ಅಲ್ಲದೇ ಪೂರ್ವಭಾವಿ ಸಮಾಲೋಚನಾ ಕೇಂದ್ರಗಳಲ್ಲಿ ನ್ಯಾಯಾಲಯದಿಂದ ಸಾಕಷ್ಟು ಪ್ರಕರಣಗಳು ಪೂರ್ವಭಾವಿ ಸಮಾಲೋಚನೆಯ ಮುಖಾಂತರ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆ ಪ್ರಕಾರ ಕಳೆದ ಒಂದು ತಿಂಗಳಿಂದ ಸಾಕಷ್ಟು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಮತ್ತು ನ್ಯಾಯಾಲಯದ ಬಾಕಿ ಪ್ರಕರಣಗಳನ್ನು ಪೂರ್ವಭಾವಿ ಸಮಾಲೋಚನೆ ಮುಖಾಂತರ ಇತ್ಯರ್ಥಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದರು.
ಲೋಕ್ ಅದಾಲತ್ನಲ್ಲಿ ಪಕ್ಷಗಾರರು ಖುದ್ದಾಗಿ ಹಾಗೂ ಭೌತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಅದಾಲತ್ನಲ್ಲಿ ಹೆಚ್ಚೆಚ್ಚು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ವಿಮಾ ಕಂಪನಿಗಳು, ಭೂ ಸ್ವಾಧೀನಾಧಿಕಾರಿಗಳು, ಬ್ಯಾಂಕುಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಪೆÇಲೀಸ್ ಇಲಾಖೆ, ನ್ಯಾಯಾಧೀಶರು ಹಾಗೂ ವಕೀಲರು, ಕಂದಾಯ ಇಲಾಖೆ, ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿರುತ್ತದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಲೋಕ್ ಅದಾಲತ್ ಸಂಬಂಧ ಈಗಾಗಲೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಪ್ರತಿದಿನ ಹಾಗೂ ಎಲ್ಲಾ ನ್ಯಾಯಾಲಯಗಳಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಏರ್ಪಡಿಸಿದ್ದು, ರಾಜೀ ಯೋಗ್ಯ ಪ್ರಕರಣಗಳಲ್ಲಿ, ಎರಡೂ ಪಕ್ಷಾಕಾರರನ್ನು ಕರೆಸಿ ಪೂರ್ವಭಾವಿ ಸಮಾಲೋಚನೆಯನ್ನು ನಡೆಸಿ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸಂಬಂಧಪಟ್ಟ ಪ್ರತಿಯೊಬ್ಬ ಪಕ್ಷಗಾರರು ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ ದೊಡ್ಡಮೋಳೆ, ಇತರರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.