ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಕೆ.ಆರ್.ನಗರ ಹಾಗೂ ಸಾಲಿಗ್ರಾಮ ತಾಲ್ಲೂಕಿನಲ್ಲಿ ಕೆ.ಅರ್.ನಗರ ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಭಾರತಿ ತಿಳಿಸಿದ್ದಾರೆ.
ರಾಷ್ಟ್ರೀಯ ತೋಟಗಾರಿಕೆ ಅಭಿವೃದ್ಧಿ ಮಿಷನ್ ಯೋಜನೆ: ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಪ್ರದೇಶ ವಿಸ್ತರಣೆ (ಅಂಗಾಂಶ ಕೃಷಿ ಬಾಳೆ) ಹಾಗೂ ಮಿನಿ ಟ್ರ್ಯಾಕ್ಟರ್ ಘಟಕಕ್ಕೆ ನಿರ್ಮಾಣಕ್ಕೆ ಸಹಾಯಧನ ಲಭ್ಯವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಘಟಕ ಅಳವಡಿಕೆಗೆ ಸಾಮಾನ್ಯ ವರ್ಗಕ್ಕೆ ಶೇ.90% ರಷ್ಟು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90% ರಷ್ಟು ಸಹಾಯಧನ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ
ತಾಳೆ ಬೆಳೆ ಅಭಿವೃದ್ಧಿ ಯೋಜನೆ : ತಾಳೆ ಬೆಳೆ ಅಭಿವೃದ್ಧಿ ಯೋಜನೆಯಡಿ ಹೊಸ ತಾಳೆ ತೋಟ ಅಭಿವೃದ್ಧಿ ಪಡಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಅವಕಾಶವಿದ್ದು
ಜೇನು ಕೃಷಿ ಅಭಿವೃದ್ಧಿ ಯೋಜನೆ ಯಡಿ ಜೇನು ಕೃಷಿ ಅಭಿವೃದ್ಧಿ ಯೋಜನೆಯಡಿ ಜೇನು ಪಟ್ಟಿಗೆಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.75% ರಷ್ಟು ಸಹಾಯಧನ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ.
ನರೇಗಾ ಯೋಜನೆಯಡಿ ಬಹುವಾರ್ಷಿಕ ಬೆಳೆಗಳ ತೋಟ ನಿರ್ಮಾಣ ಮಾಡಲು ಸಹಾಯಧನದ ಜತಗೆ
ರಾಷ್ಟ್ರೀಯ ಕೃಷಿ ವಿಕಾಸದ ಅಡಿ ತಂಬಾಕು ಬೆಳೆ ಪ್ರದೇಶದಲ್ಲಿ, ಪರ್ಯಾಯ (ಬಾಳೆ, ತರಕಾರಿ), ಲಘು ಪೋಷಕಾಂಶ ಹಾಗೂ ಪ್ಲಾಸ್ಟಿಕ್ ಕ್ರೇಟ್ಸ್ ಗೆ ಸಹಾಯಧನ ಲಭ್ಯವಿರುತ್ತದೆ. ನೀರು ಸಂಗ್ರಹಣಾ ಘಟಕ ನಿರ್ಮಿಸಲು ಶೇ.50% ರಷ್ಟು ಸಹಾಯಧನ ಲಭ್ಯವಿದ್ದು ಈ ಎಲ್ಲಾ ಯೋಜನೆಗಳಿಗೆ ಆಸಕ್ತ ರೈತರು ಜೂನ್ 30 ರೊಳಗೆ ಅರ್ಜಿ ಸಲ್ಲಿಸ ಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.