ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಇಂಗಳಗಿ ಗ್ರಾಮದ ಶ್ರೀದೇವಿ ಪ್ರಭಾನೂರ್ (28) ಹಾಗೂ ನವಜಾತ ಶಿಶು ಸಾವನ್ನಪ್ಪಿದ್ದಾರೆ. ನಿವೃತ್ತ ಆರೋಗ್ಯ ಸಹಾಯಕಿ ಗಂಗುಬಾಯಿ ಬಳಿ ಹೆರಿಗೆಗಾಗಿ ದಾಖಲಾದ ಮಹಿಳೆಗೆ ಸಮಯಕ್ಕೆ ಸರಿಯಾದ ಚಿಕಿತ್ಸೆ ಲಭಿಸದ ಕಾರಣ, ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮೃತ ಶ್ರೀದೇವಿಗೆ ಮೂವರು ಹೆಣ್ಣುಮಕ್ಕಳಿದ್ದು, ಈ ಬಾರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಘಟನೆ ಸಂಬಂಧ ತನಿಖೆ ಆರಂಭವಾಗಿದೆ.