ಮಂಗಳೂರು (ದಕ್ಷಿಣ ಕನ್ನಡ) : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಕಿನ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡುಮನೆ ಎಂಬಲ್ಲಿ ನೆರೆ ಬಂದಿದೆ.
ವಿಪರೀತ ಮಳೆಯಿಂದಾಗಿ ಸೇತುವೆಯ ತಡೆಗೋಡೆಯನ್ನೇ ಭೇದಿಸಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿತು. ಈ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರು ಪರಿಶೀಲನೆ ನಡೆಸಿ, ಸಣ್ಣ ನೀರಾವರಿ ಇಲಾಖೆಗೆ ಮಾಹಿತಿ ನೀಡಿ ಸೂಕ್ತ ಪರಿಹಾರ ನೀಡಲು ಆದೇಶಿಸಿದರು.
ಕಿನ್ಯ ಗ್ರಾಮ ಪಂಚಾಯತ್ ಸದಸ್ಯ ಸಿರಾಜ್ ಕಿನ್ಯ, ಪಂಚಾಯತ್ ಕಾರ್ಯದರ್ಶಿ ಸಾಲಿನಿ, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.