ಮೈಸೂರು: ಅಗ್ರಹಾರದಲ್ಲಿರುವ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಠಾಣೆಯಲ್ಲಿರುವ ಕೃಷ್ಣನ ವಿಗ್ರಹಕ್ಕೆ ವಿಶೇಷವಾಗಿ ಅಲಂಕರಿಸಿ ಪೂಜಿಸಿ ನಂತರ ಕೆ ಆರ್ ಠಾಣೆಯ ವೃತ್ತ ನಿರೀಕ್ಷಿಕರಾದ ನಾಗೇಗೌಡ ಎನ್ ಸಿ ಪ್ರಸಾದ ವಿತರಿಸಿದರು.
ಇದೇ ಸಂದರ್ಭದಲ್ಲಿ ಕೆಆರ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹರೀಶ್ ಹಾಗೂ ಪಿ ಆರ್ ಮಂಜು ಮತ್ತು ಮಹಿಳಾ ಪೇದೆಗಳಾದ ನಂದಿನಿ, ಅರ್ಪಿತ, ಆಶಿ ಲೋಕೇಶ್, ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಜೊತೆಯಲ್ಲಿ ಸ್ಥಳೀಯ ಮುಖಂಡರಾದ ಕೆಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ನಜರ್ಬಾದ್ ನಟರಾಜ್, ಜಿ ರಾಘವೇಂದ್ರ, ನವೀನ್ ಕೆಂಪಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ವಿನೋದ್ ರಾಜ್, ಸಂತೋಷ್ ಕಿರಾಲು, ನಿವೃತ್ತ ಪೊಲೀಸ್ ಅಧಿಕಾರಿ ಬೀರೇಗೌಡ, ಹರೀಶ್ ನಾಯ್ಡು, ಎಸ್ ಎನ್ ರಾಜೇಶ್, ರಾಕೇಶ್, ರವಿಚಂದ್ರ, ಕನಕ ಮೂರ್ತಿ , ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.