Friday, January 23, 2026
Google search engine

Homeರಾಜ್ಯಸುದ್ದಿಜಾಲಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಸೆರೆ, ಡ್ರೋನ್ ಕಾರ್ಯಾಚರಣೆ ಯಶಸ್ವಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಸೆರೆ, ಡ್ರೋನ್ ಕಾರ್ಯಾಚರಣೆ ಯಶಸ್ವಿ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆ ಹೋಗುತ್ತಿದ್ದ ಭಕ್ತನನ್ನು ಕೊಂದಿದ್ದ, ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಈ ಚಿರತೆ ತುಂಬಾನೇ ಆತಂಕ ಸೃಷ್ಟಿಯಾಗಿತ್ತು. ಚಿರತೆ ಸೆರೆಗಾಗಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸತತ ನಿಗಾ ವಹಿಸಿದ್ದರು. ಇದೀಗ ಅಂತಿಮವಾಗಿ ಚಿರತೆ ಸೆರೆಸಿಕ್ಕಿದೆ. ಇನ್ನೂ, ಮೃತನ ಕುಟುಂಬದ ಸದಸ್ಯರಿಗೆ 5 ಲಕ್ಷ ಪರಿಹಾರ ಕೂಡ ಘೋಷಣೆ ಮಾಡ್ಲಾಗಿದೆ.

ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸಿ ಚಿರತೆ ಸೆರೆಗೆ ಕಣ್ಗಾವಲು ವಹಿಸಿದ್ದರು. ಇದೀಗ ಅರವಳಿಕೆ ಕೊಟ್ಟು ಚಿರತೆಯನ್ನು ಸೆರೆಹಿಡಿಯಲಾಗಿದೆ.ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿದ್ದರು.

ಸುಮಾರು ಎರಡರಿಂದ ಮೂರು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಚಿರತೆ ಸ್ಥಳಾಂತರಿಸಲು ಅರಣ್ಯಾಧಿಕಾರಿಗಳು ನಿರ್ಧಾರ ಮಾಡಿದ್ದಾರೆ. ಚಿರತೆ ಸೆರೆಯಿಂದ ಯಿಂದ ಭಕ್ತರಲ್ಲಿ ಮನೆಮಾಡಿದ್ದ ಆತಂಕ ನಿವಾರಣೆಯಾಗಿದೆ.

RELATED ARTICLES
- Advertisment -
Google search engine

Most Popular