ಶಿವಮೊಗ್ಗ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಆಕಾಶದೆತ್ತರಕ್ಕೆ ಗಾಳಿ ಬಲೂನ್ ರೀತಿಯಲ್ಲಿ ಏರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಆಶಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಜಿಲ್ಲಾ ಸ್ವೀಪ್ ಸಮಿತಿ. ಇಂದು ಮೇ.4 ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಮತದಾನ ಜಾಗೃತಿಗಾಗಿ ಬಿಸಿ ಗಾಳಿ ಬಲೂನ್ ಹಾರಾಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ ಶೇ. ಜಿಲ್ಲಾ ಸ್ವೀಪ್ ಸಮಿತಿಯು ಹಲವು ಕಾರ್ಯಕ್ರಮ ಹಾಗೂ ವಿಶಿಷ್ಟ, ವಿಭಿನ್ನ ಚಟುವಟಿಕೆಗಳ ಮೂಲಕ ಮತದಾನ ಜಾಗೃತಿಯನ್ನು ಹಮ್ಮಿಕೊಂಡಿದ್ದು, ಮತದಾರರು ತಪ್ಪದೇ ಮತದಾನದಲ್ಲಿ ಪಾಲ್ಗೊಂಡು ದೇಶದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.
ಮತದಾನ ಜಾಗೃತಿಯ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾರಲು ಅವಕಾಶವಿದೆ: ಮತದಾನ ಜಾಗೃತಿ ಕುರಿತು ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಇಂದು ವಿಶೇಷವಾಗಿ ಏರ್ಪಡಿಸಿದ್ದ ಹಾಟ್ ಏರ್ ಬಲೂನ್ನಲ್ಲಿ ಅವಕಾಶ ನೀಡಿ ಅಭಿನಂದಿಸಲಾಯಿತು.
ವಿಜಯ ಕರ್ನಾಟಕ ರಸಪ್ರಶ್ನೆ ವಿಜೇತರು, ರೇಡಿಯೋ ರಸಪ್ರಶ್ನೆ ವಿಜೇತರು, ರಾಷ್ಟ್ರಮಟ್ಟದ ರಸಪ್ರಶ್ನೆ ವಿಜೇತರು, ಕ್ರಿಕೆಟ್ ಪಂದ್ಯಾವಳಿ ವಿಜೇತರು, ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಮಾಧ್ಯಮ ತಂಡದ ಸದಸ್ಯರು ಮತ್ತು ಸಾರ್ವಜನಿಕರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರಂಗನಾಥ್, ವರದಿಗಾರ ರಾಜು ಆರ್, ಚುನಾವಣಾ ಐಕಾನ್ ಡಾ.ಸುಬ್ರತಾ, ಜ್ಯೋತಿ, ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೇಜ್ ಹಾಗೂ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.