Friday, April 11, 2025
Google search engine

HomeUncategorizedರಾಷ್ಟ್ರೀಯಡಿ.2 ಕ್ಕೆ ಲೋಕಸಭೆ ಕಲಾಪ ಮುಂದೂಡಿಕೆ

ಡಿ.2 ಕ್ಕೆ ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ: ಅದಾನಿ ವಂಚನೆ ಪ್ರಕರಣ ಸಂಬಂಧ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳ ನಾಯಕರಿಂದ ಗದ್ದಲ ಕೋಲಾಹಲವನ್ನೇ ಉಂಟು ಮಾಡಿತು. ಈ ಹಿನ್ನಲೆಯಲ್ಲಿ ಲೋಕಸಭೆ ಕಲಾಪವನ್ನು ಡಿಸೆಂಬರ್ 2 ರ 11 ಗಂಟೆಗೆ ಮುಂದೂಡಿಕೆ ಮಾಡಲಾಯಿತು.

ಅದಾನಿ ವಿಷಯದ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳ ಬೇಡಿಕೆಯ ಮಧ್ಯೆ ಸದನದಲ್ಲಿ ಗದ್ದಲದ ಕಾರಣ ಲೋಕಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಡಿಸೆಂಬರ್ 2 ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

ಅದಾನಿ ಸಮೂಹದ ವಿರುದ್ಧದ ಆರೋಪಗಳು ಮತ್ತು ಮಣಿಪುರ ಮತ್ತು ಸಂಭಾಲ್ನಲ್ಲಿ ನಡೆದ ಹಿಂಸಾಚಾರದ ಕುರಿತು ಚರ್ಚೆಗೆ ಮುಂದೂಡಿಕೆ ನೋಟಿಸ್ಗಳನ್ನು ತಿರಸ್ಕರಿಸಿದ್ದನ್ನು ವಿರೋಧ ಪಕ್ಷದ ಸಂಸದರು ಪ್ರತಿಭಟಿಸಿದ್ದರಿಂದ ರಾಜ್ಯಸಭೆಯ ಕಲಾಪಗಳನ್ನು ಮುಂದೂಡಲಾಯಿತು. ಸದನ ಸೋಮವಾರ ಮತ್ತೆ ಸಭೆ ಸೇರಲಿದೆ.

RELATED ARTICLES
- Advertisment -
Google search engine

Most Popular