Monday, April 21, 2025
Google search engine

Homeರಾಜಕೀಯಲೋಕಸಭಾ ಚುನಾವಣೆ:  ನಾಳೆಯಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ, ಏ.4 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ

ಲೋಕಸಭಾ ಚುನಾವಣೆ:  ನಾಳೆಯಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ, ಏ.4 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ

ಮಂಡ್ಯ: ಲೋಕಸಭಾ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ನೀಡಲಾಗಿದ್ದು, ನಾಮಪತ್ರ ಸಲ್ಲಿಸಲು  ಏಪ್ರಿಲ್ 04 ಕೊನೆಯ ದಿನಾಂಕವಾಗಿದ್ದು, ಏ.05 ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಏ.08 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.

2024ರ ಲೋಕಸಭಾ ಚುನಾವಣೆ ಹಿನ್ನೆಲೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಏ.26 ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರಗೆ ಮತದಾನದ ನಡೆಯಲಿದ್ದು, ಜೂನ್ 04 ರಂದು ಮತ  ಎಣಿಕೆ ನಡೆಯಲಿದೆ ಎಂದರು.

ಬೆಳಿಗ್ಗೆ 11 ಗಂಟೆಯಿಂದ 3 ಗಂಟೆಯ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.  ಜಿಲ್ಲಾಧಿಕಾರಿ ಕಚೇರಿಯ ಕೊಠಡಿ ಸಂಖ್ಯೆ 29ರಲ್ಲಿ ನಾಮಪತ್ರ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.

ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ 100ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಚುನಾವಣಾಧಿಕಾರಿಗಳ ಕಛೇರಿಗೆ ಕೇವಲ ಮೂರು ವಾಹನ ಹಾಗೂ ನಾಮಪತ್ರ ಸಲ್ಲಿಸುವ ಅಭ್ಯರ್ಥಿ ಸೇರಿ 5 ಜನರಿಗೆ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಕಚೇರಿಯಲ್ಲಿ ಸಿಸಿಟಿವಿ ಅಳವಡಿಕೆ ಹಾಗೂ ಪ್ರತ್ಯೇಕ ವಿಡಿಯೋ ರೆಕಾರ್ಡಿಂಗ್ ವ್ಯವಸ್ಥೆ ಮಾಡಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17,59,175 ಮತದಾರರಿದ್ದು, 8,67,652 ಪುರುಷ ಮತದಾರರು, 8,91,355 ಮಹಿಳಾ ಮತದಾರರು ಹಾಗೂ 168 ಇತರೆ ಮತದಾರರು ಇದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 35,140 ಯುವ ಮತದಾರರು ಹಾಗೂ 85 ವರ್ಷ ಮೇಲ್ಪಟ್ಟ ಮತದಾರರು 23,044 ಮಂದಿ ಇದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 2,074 ಮತಗಟ್ಟೆಗಳಿದೆ. ನಾಮಪತ್ರ ಸಲ್ಲಿಸಿದ ದಿನದಿಂದ ಅಭ್ಯರ್ಥಿಯ ಚುನಾವಣೆ ವೆಚ್ಚ ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಅಭ್ಯರ್ಥಿಗೆ 25 ಸಾವಿರ ಠೇವಣಿ, SC/ST ಗೆ 12,500 ರೂ ಠೇವಣಿ ನಿಗಧಿ ಮಾಡಲಾಗಿದೆ. ನಾಮಪತ್ರ ಸಲ್ಲಿಸುವ ಅಭ್ಯರ್ಥಿ ಹೊಸ ಬ್ಯಾಂಕ್ ಖಾತೆ ತೆರೆದು ಚುನಾವಣೆ ವೆಚ್ಚ ವಹಿವಾಟು ನಡೆಸಲು ಸೂಚನೆ  ನೀಡಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಾಗಿದೆ.

ಚುನಾವಣೆಯ ವೇಳೆ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಲಾಗುವುದು. ಅಭ್ಯರ್ಥಿಗಳು ಹಾಗೂ‌ ರಾಜಕೀಯ ಪಕ್ಷಗಳ ಚಲನವಲನಗಳ ಮೇಲೆ‌ ನಿಗಾವಹಿಸಲಾಗುವುದು.

ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು ಇರಲಿದೆ.ಮಂಡ್ಯ ಜಿಲ್ಲೆಯ ಜನರು ಸಹಕರಿಸುವಂತೆ ಡಿಸಿ ಡಾ.ಕುಮಾರ ಮನವಿ ಮಾಡಿದ್ದಾರೆ.

ಖಾಸಗಿ ಕಾರ್ಯಕ್ರಮಕ್ಕೆ ಮದುವೆ ಗಳಿಗೆ ಅನುಮತಿ ಪಡೆಯುವ ಅವಶ್ಯಕತೆ ಇಲ್ಲ. ರಾಜಕೀಯ ವೇದಿಕೆ ಕಾರ್ಯಕ್ರಮಕ್ಕೆ ಪ್ರಚಾರಕ್ಕೆ ಅನುಮತಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular