ಬಳ್ಳಾರಿ: ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಇಬ್ಬರು ಆರ್ ಟಿಓ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಆರ್ ಟಿಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ, ಏಜೆಂಟ್ ಮೊಹಮ್ಮದ್ ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪವಿತ್ತು. ಈ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್ ಪಿ ಶಶಿಧರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇತ್ತೀಚೆಗೆ ಶಾಸಕ ಭರತರೆಡ್ಡಿ ಆರ್ ಟಿಒ ಕಚೇರಿಗೆ ಭೇಟಿ ನೀಡಿದ್ದರು.