ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 1 ವರ್ಷದವರೆಗೆ ಗಡಿಪಾರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ತಿಮರೋಡಿಯನ್ನ ಗಡಿಪಾರು ಮಾಡಿ ಈ ಕುರಿತು ಪುತ್ತೂರು AC ಸ್ಟೆಲ್ಲಾ ವರ್ಗೀಸ್ ಅವರು ಆದೇಶ ಹೊರಡಿಸಿದ್ದಾರೆ.
ತಿಮರೋಡಿ ವಿರುದ್ಧ 32 ಕೇಸ್ ಇರುವ ಹಿನ್ನೆಲೆಯಲ್ಲಿ 1 ವರ್ಷದ ಅವಧಿಗೆ ಮಾನ್ವಿಗೆ ಗಡಿಪಾರು ಮಾಡಲಾಗಿದೆ. ಸೌಜನ್ಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣ ದಾಖಲಾಗಿವೆ.
ಬುರುಡೆ ಪ್ರಕರಣ ಹಾಗೂ ಶವ ಹೂತಿಟ್ಟ ಆರೋಪ ಪ್ರಕರಣದಲ್ಲಿನ ಆರೋಪಿ ಚೆನ್ನಯ್ಯನಿಗೆ ಆಶ್ರಯ ನೀಡಿದ್ದ ಮಹೇಶ್ ಶೆಟ್ಟಿ ತಿಮರೋಡಿಯನ್ನ ಪುತ್ತೂರು ಸಹಾಯಕ ಆಯುಕ್ತರು ಗಡಿಪಾರು ಮಾಡಿ ಆದೇಶಿಸಿದ್ದಾರೆ.