ಮಳವಳ್ಳಿ : ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ತಂದೆ ಪಿ.ಎಸ್. ಮಲ್ಲಯ್ಯ(93) ವಯೋಸಹಜ ಕಾಯಿಲೆಯಿಂದ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಪುರಗಾಲಿ ಗ್ರಾಮದವರಾದ ಮಲ್ಲಯ್ಯ, ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ತಾಲೂಕು ಬೋರ್ಡ್ ಸದಸ್ಯರಾಗಿ, ಪುರಿಗಾಲಿ ಗ್ರಾಪಂ, ಹಾಲು ಉತ್ಪಾದಕರ ಸಂಘ, ಪ್ರಾಥಮಿಕ ಕೃಷಿ ಪರಿಷತ್ ನ ಅಧ್ಯಕ್ಷರಾಗಿ ಮಲ್ಲಯ್ಯ ಸೇವೆ ಸಲ್ಲಿಸಿದ್ದರು. ಪತ್ನಿ, ಶಾಸಕ ನರೇಂದ್ರಸ್ವಾಮಿ ಸೇರಿ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನ ಅಗಲಿದ್ದಾರೆ. ಇಂದು ಮಧ್ಯಾಹ್ನ ಮೂರು ಗಂಟೆಗೆ ಹುಟ್ಟೂರು ಪೂರಿಗಾಲಿಯಲ್ಲಿ ಮೃತ ಮಲ್ಲಯ್ಯರ ಅಂತ್ಯಕ್ರಿಯೆ ನೆರವೇರಲಿದೆ.