Saturday, April 19, 2025
Google search engine

Homeರಾಜ್ಯಸಮರ್ಪಕ ಆಡಳಿತ ನೀಡುವಲ್ಲಿ ಮಮತಾ ಬ್ಯಾನರ್ಜಿ ಅಸಮರ್ಥರು: ಸಚಿವ ಪ್ರಲ್ಹಾದ್ ಜೋಶಿ ಕಿಡಿ

ಸಮರ್ಪಕ ಆಡಳಿತ ನೀಡುವಲ್ಲಿ ಮಮತಾ ಬ್ಯಾನರ್ಜಿ ಅಸಮರ್ಥರು: ಸಚಿವ ಪ್ರಲ್ಹಾದ್ ಜೋಶಿ ಕಿಡಿ

ಹುಬ್ಬಳ್ಳಿ: ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಹೇಳಿಕೆ ಕೇವಲ ಡ್ರಾಮಾ. ಜನರೆದುರು ಈ ರೀತಿ ಕಣ್ಣಾ ಮುಚ್ಚಾಲೆ ಆಡುವುದು ಬೇಡ. ಈ ರೀತಿ ಹೇಳಿಕೆ ನೀಡುವ ಬದಲಿಗೆ ರಾಜೀನಾಮೆ ನೀಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡುವನಾಟಕ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಸಿಎಂ ಆಗಿ ಸರ್ಕಾರ ಮುನ್ನಡೆಸಲು ಅವರು ಸಮರ್ಥರಿಲ್ಲ. ಸಮರ್ಪಕ ಆಡಳಿತ ನೀಡುವಲ್ಲಿ ಅವರು ಅಸಮರ್ಥರಾಗಿದ್ದಾರೆ ಎಂದು ಟೀಕಿಸಿದರು.

ಅಧಿಕಾರ ನೀಡಿದ ಜನರಿಗೆ ನ್ಯಾಯ ಒದಗಿಸುವಲ್ಲಿ ಕೂಡ ಮಮತಾ ಬ್ಯಾನರ್ಜಿ ಅವರು ವೈಫಲ್ಯ ಕಂಡಿದ್ದಾರೆ. ಸಮುದಾಯಕ್ಕೆ ಅವಮಾನ ಮಾಡುತ್ತಲೇ ಬಂದಿದ್ದಾರೆ. ಇದೇ ಪ್ರವೃತ್ತಿ ಮುಂದುವರಿಸುವ ಬದಲು ರಾಜೀನಾಮೆ ನೀಡುವುದೇ ಸೂಕ್ತ ಎಂದರು.

RELATED ARTICLES
- Advertisment -
Google search engine

Most Popular