Friday, April 11, 2025
Google search engine

Homeಸ್ಥಳೀಯಎಣ್ಣೆ ಹೊಡೆಯಲು ಹಣ ನೀಡದ್ದಕ್ಕೆ, ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿ, ವ್ಯಕ್ತಿಯ ಬರ್ಬರ ಹತ್ಯೆ

ಎಣ್ಣೆ ಹೊಡೆಯಲು ಹಣ ನೀಡದ್ದಕ್ಕೆ, ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿ, ವ್ಯಕ್ತಿಯ ಬರ್ಬರ ಹತ್ಯೆ

ಮೈಸೂರು : ಮದ್ಯ ಸೇವನೆಗೆ ಹಣ ನೀಡಲು ನಿರಾಕರಿಸಿದಕ್ಕೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ಈ ಒಂದು ಕೊಲೆ ನಡೆದಿದೆ.

ನಂಜನಗೂಡಿನ ಮಹದೇವ ನಗರದ ನಿವಾಸಿ ರಫೀಕ್ (40) ಸಾವನ್ನಪ್ಪಿದ್ದಾರೆ. ನೀಲಕಂಠ ನಗರದ ನಿವಾಸಿ ಸಲೀಂ ಹಾಗೂ ಆತನ ಸ್ನೇಹಿತನಿಂದ ಈ ಒಂದು ಕೊಲೆ ನಡೆದಿದೆ. ರಫೀಕ್ ಬಳಿ ಬಂದು ಮದ್ಯ ಸೇವನೆಗೆ ಸಲೀಂ ಮತ್ತು ಆತನ ಸ್ನೇಹಿತ ಹಣ ಕೇಳಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದ್ದಕ್ಕೆ ರಫೀಕ್ ಜೊತೆಗೆ ಸಲೀಂ ಮತ್ತು ಆತನ ಸ್ನೇಹಿತ ಗಲಾಟೆ ಮಾಡಿದ್ದಾರೆ.

ರಫೀಕ್ ಮೇಲೆ ಬಿಯರ್ ಬಾಟಲಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.ತೀವ್ರವಾಗಿ ಗಾಯಗೊಂಡಿದ್ದ ರಫೀಕ್ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಸಾವನ್ನಪ್ಪಿದ್ದಾರೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular