Friday, April 18, 2025
Google search engine

Homeರಾಜ್ಯಸುದ್ದಿಜಾಲಮಂಡ್ಯ: ಕಾಡಾನೆ ದಾಳಿಗೆ ಜಮೀನಿನಲ್ಲಿದ್ದ ತೆಂಗಿನ ಮರ ನೆಲಸಮ

ಮಂಡ್ಯ: ಕಾಡಾನೆ ದಾಳಿಗೆ ಜಮೀನಿನಲ್ಲಿದ್ದ ತೆಂಗಿನ ಮರ ನೆಲಸಮ

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪ ನಂದಿಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಜಮೀನಿನಲ್ಲಿದ್ದ ತೆಂಗಿನ ಮರಗಳು ನೆಲಸಮಗೊಂಡಿದ್ದು, ರೈತ ಕಂಗಾಲಾಗಿದ್ದಾನೆ.

ಗ್ರಾಮದಲ್ಲಿ ತಡರಾತ್ರಿ ಗ್ರಾಮದ ಜಯರಾಮ ಎಂಬುವವರ ಜಮೀನಿಗೆ ಲಗ್ಗೆ ಇಟ್ಟ ಎರಡು ಕಾಡಾನೆಗಳು ತೆಂಗಿನ ಮರಗಳನ್ನು ನೆಲಸಮಗೊಳಿಸಿವೆ.

ಜಮೀನಿನಲ್ಲಿದ್ದ ಸುಮಾರು ತೆಂಗಿನ ಮರಗಳನ್ನು ಮುರಿದು ಹಾಕಿರುವುದರಿಂದ ನಷ್ಟ ಉಂಟಾಗಿದೆ.  ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಕಾಡಾನೆಗಳನ್ನು ಓಡಿಸಲು ಕ್ರಮ ವಹಿಸಬೇಕು. ಮತ್ತು ಶೀಘ್ರದಲ್ಲೇ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಅರಣ್ಯ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಪರಿಹಾರ ನೀಡುವಂತೆ ರೈತ ಮನವಿ ಮಾಡಿದ್ದಾನೆ.

ನಮ್ಮ ಭಾಗದಲ್ಲಿ ಚಿರತೆ ಆನೆ ಹಾವಳಿ ಹೆಚ್ಚಾಗಿದೆ. ಸುಮಾರು ದಿನಗಳಿಂದ ನಮ್ಮ ಗ್ರಾಮದಲ್ಲಿ ಕಾಡಾನೆಗಳು ಹೆಚ್ಚಾಗಿವೆ. ಆನೆಗಳ ಪ್ರತ್ಯಕ್ಷದಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕ್ಕೀಡಾಗಿದ್ದಾರೆ.

RELATED ARTICLES
- Advertisment -
Google search engine

Most Popular