ಮಂಡ್ಯ: ಫ್ಲೆಕ್ಸ್ ಗೆ ಹೊಡೆದ ಕಲ್ಲು ತಲೆ ಮೇಲೆ ಬಿದ್ದು, ವ್ಯಕ್ತಿ ಗಾಯಗೊಂಡಿರುವ ಘಟನೆ ನಂದ ವೃತ್ತದಲ್ಲಿ ನಡೆದಿದೆ.
ಕೆರಗೋಡು ಗ್ರಾಮದಲ್ಲಿ ಪ್ರತಿಭಟನೆ ಮುಂದುವರೆದಿದ್ದು, ರಸ್ತೆ ಬದಿಯಲ್ಲಿ ಶಾಸಕ ಗಣಿಗ ರವಿಕುಮಾರ್ ಫ್ಲೆಕ್ಸ್ ಹಾಕಲಾಗಿತ್ತು. ಈ ವೇಳೆ ಫ್ಲೆಕ್ಸ್ ಗೆ ಹೊಡೆದ ಕಲ್ಲು ವ್ಯಕ್ತಿ ತಲೆ ಮೇಲೆ ಬಿದ್ದು ಗಾಯಗೊಂಡಿದ್ದಾರೆ.
ತಕ್ಷಣವೇ ಗಾಯಗೊಂಡ ವ್ಯಕ್ತಿಯನ್ನ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಇದಕ್ಕೂ ಮುನ್ನ ಮಂಡ್ಯದ ಮಹಾವೀರ ವೃತ್ತದಲ್ಲಿ ಹಾಕಲಾಗಿದ್ದ ಚಲುವರಾಯಸ್ವಾಮಿ, ಗಣಿಗ ರವಿಕುಮಾರ್ ಫ್ಲೆಕ್ಸ್ ನ್ನು ಕಾರ್ಯಕರ್ತರು ಹರಿದುಹಾಕಿದ್ದಾರೆ.
ಈ ವೇಳೆ ಕಾರ್ಯಕರ್ತರನ್ನ ಪೊಲೀಸರು ತಡೆದಿದ್ದು, ಬಳಿಕ ಚದುರಿಸಿದ್ದಾರೆ.