Sunday, April 20, 2025
Google search engine

Homeರಾಜ್ಯಮಂಡ್ಯ: ಮುಂದುವರಿದ ಅತಿಥಿ ಉಪನ್ಯಾಸಕರ ಪ್ರೊಟೆಸ್ಟ್.!

ಮಂಡ್ಯ: ಮುಂದುವರಿದ ಅತಿಥಿ ಉಪನ್ಯಾಸಕರ ಪ್ರೊಟೆಸ್ಟ್.!

ಮಂಡ್ಯ: ಸೇವಾ ಖಾಯಂಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ತರಗತಿ ಬಹಿಷ್ಕರಿಸಿ ಧರಣಿ ಕುಳಿತಿದ್ದಾರೆ.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಧರಣಿ ಕುಳಿತಿರುವ ಉಪನ್ಯಾಸಕರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು, ಸೇವಾ ಭದ್ರತೆ, ಆರ್ಥಿಕ ಭದ್ರತೆ, ಸೇವಾ ಖಾಯಂಗಾಗಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ತಕ್ಷಣವೇ ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಶಿಕ್ಷಕರು ಬೀದಿಗೆ ಬಿದ್ದಿದ್ದರು ಸರ್ಕಾರ ನಿರ್ಲಕ್ಷ್ಯ ತೋರಿದ್ದಾರೆ. ನಮ್ಮ ನೆರವಿಗೆ ಸರ್ಕಾರ ನಿಲ್ಲುವಂತೆ ಉಪನ್ಯಾಸಕರು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular